ಡಿಕೆಶಿ, ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ

Date:

  • ಬಿಜೆಪಿಯ ಎರಡು ಪ್ರತ್ಯೇಕ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ
  • ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಹೊತ್ತ ಡಿಕೆಶಿ, ಜಾಕಿರ್‌ ಹುಸೇನ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಎಸ್‌ಡಿಪಿಐ ಮುಖಂಡನ ವಿರುದ್ದ ರಾಜ್ಯ ಬಿಜೆಪಿ ನೀಡಿದ್ದ ದೂರನ್ನು ಚುನಾವಣಾ ಆಯೋಗ ದಾಖಲಿಸಿಕೊಂಡಿದೆ.

- Advertisement -

ಮಂಗಳವಾರ ಮಂಡ್ಯ ಜಿಲ್ಲೆಯ ಬೇವಿನಹಳ್ಳಿಯಲ್ಲಿ ಕಾಂಗ್ರೆಸ್‌ನ ʼಪ್ರಜಾಧ್ವನಿʼ ಯಾತ್ರೆ ನಡೆದ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕಲಾವಿದರತ್ತ ಹಣ ಎಸೆದಿದ್ದರು. ‌ಆ ಮೂಲಕ ಅವರು ಚುನಾವಣಾ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಡಿಕೆಶಿ ಜೊತೆಗೆ ಶ್ರೀರಂಗಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡರ ವಿರುದ್ಧವೂ ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಆಗ್ರಹಿಸಿದೆ. ಈ ವಿಚಾರವಾಗಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಭಾರತೀಯ ಜನತಾ ಪಕ್ಷ ಮನವಿ ಸಲ್ಲಿಸಿದೆ.

ಪಕ್ಷದ ಪ್ರಚಾರ ಕಾರ್ಯದಲ್ಲಿದ್ದ ಶಿವಕುಮಾರ್, ಕಲಾವಿದರು ಹಾಗೂ ಜನರತ್ತ 500ರ ನೋಟುಗಳನ್ನು ಎಸೆದು ಮತದಾರರ ಮೇಲೆ ಪ್ರಭಾವ ಬೀರಲು ಅವರು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ.

ಎರಡನೇ ದೂರು:
ಚಿತ್ರದುರ್ಗ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಜಾಕೀರ್ ಹುಸೇನ್ ವಿರುದ್ಧವೂ ಬಿಜೆಪಿ ಆಯೋಗಕ್ಕೆ ದೂರು ದಾಖಲಿಸಿದೆ.

ಶಾಂತಿ ಕದಡುವ, ದ್ವೇಷ ಹರಡುವ ಮತ್ತು ಮಾನಹಾನಿ ಮಾಡುವ ಉದ್ದೇಶದ ಹೇಳಿಕೆಯನ್ನು ಜಾಕಿರ್ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮುಸ್ಲಿಮರ ಮೀಸಲಾತಿ ರದ್ದು ಮಾಡಿದ ಸಂಬಂಧ ನಡೆದ ಪ್ರತಿಭಟನೆಯಲ್ಲಿ ಜಾಕೀರ್ ಹುಸೇನ್,“ನಮ್ಮ ಹಕ್ಕನ್ನು ಹೀನಾಯವಾಗಿ ಕಸಿದುಕೊಳ್ಳಲಾಗಿದೆ. ನಮ್ಮ ಹಕ್ಕನ್ನು ವಾಪಸ್ ಕೊಡದಿದ್ದರೆ ಸಿಎಂ ಬೊಮ್ಮಾಯಿಯವರ ಬಟ್ಟೆ ಬಿಚ್ಚಿಸುತ್ತೇವೆ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ʼಹಿಜಾಬ್, ಆಜಾನ್‌ಗೆ ತಲೆ ಕೊಟ್ಟೆವು. ಮೀಸಲಾತಿ ವಿಚಾರದಲ್ಲಿ ತಲೆ ಹೋದರೂ ಚಿಂತೆಯಿಲ್ಲ. ಜೈಲಿಗೆ ಹೋದರೂ ಚಿಂತೆಯಿಲ್ಲ. ನಾವೆಲ್ಲ ಉಗ್ರವಾಗಿ ಹೋರಾಡುತ್ತೇವೆʼಎಂದು ಎಸ್‌ಡಿಪಿಐ ನಾಯಕ ಹೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಶಾಂತಿಗೆ ಹಾನಿ ಉಂಟು ಮಾಡುವ ಮತ್ತು ದ್ವೇಷ ಹರಡುವ ಉದ್ದೇಶದ ಈ ಮಾತುಗಳನ್ನು ಗಮನಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿದೆ.

ಈ ಸುದ್ದಿ ಓದಿದೀರಾ? :ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಈ ದೂರು ದಾಖಲಾಗಿದೆ. ಅಂತಿಮವಾಗಿ ಈ ಇಬ್ಬರೂ ನಾಯಕರ ವಿರುದ್ದ ಕ್ರಮಕ್ಕೆ ಬಿಜೆಪಿ ಆಯೋಗವನ್ನು ಒತ್ತಾಯಿಸಿದೆ.

ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಲು ತೆರಳಿದ್ದ ಬಿಜೆಪಿ ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಜಿಲ್ಲಾ ವಕ್ತಾರ ರಾಘವೇಂದ್ರ ರಾವ್ ಅವರಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...