ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

Date:

  • ಸಿದ್ದರಾಮಯ್ಯ ವಿರುದ್ದ ಎರಡು ದೂರು ದಾಖಲು
  • ಚುನಾವಣಾ ಅಧಿಕಾರಿಗೆ ಪತ್ರ ಸಲ್ಲಿಸಿದ ಬಿಜೆಪಿ ನಾಯಕರು

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಜೆಪಿ, “ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರ ಬಿಳಗುಲಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ಸಂಜೆ 4.15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1 ಸಾವಿರ ರೂಪಾಯಿ ನೀಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ” ಎಂದು ಬಿಜೆಪಿ ಮನವಿ ಮಾಡಿದೆ.

ಈ ಸಂಬಂಧ ಮಾರ್ಚ್ 30ನೇ ತಾರೀಖು ಬಿಜೆಪಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ. ಹಣ ಹಂಚಿರುವ ವಿಡಿಯೋದ ಲಿಂಕ್ ವಿವರವನ್ನು ಮನವಿ ಪತ್ರದಲ್ಲಿ ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ವಕ್ತಾರ ಡಾ. ರಾಘವೇಂದ್ರ ರಾವ್, ಕಾನೂನು ಪ್ರಕೋಷ್ಠದ ಸದಸ್ಯ ಶಿವಕುಮಾರ್ ಅವರ ನಿಯೋಗವು ಈ ದೂರುಗಳನ್ನು ಸಲ್ಲಿಸಿದೆ.ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಚುನಾವಣಾ ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ಬರುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತೊಂದು ದೂರು ದಾಖಲಿಸಿದೆ.

“ಕಾಂಗ್ರೆಸ್ ಕಟ್ಟಿಹಾಕುವುದಕ್ಕಾಗಿಯೇ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳನ್ನು ಚುನಾವಣಾ ಆಯೋಗ ನಿಯೋಜಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದು, ಇದು ಸಂವಿಧಾನಾತ್ಮಕ ಸಂಸ್ಥೆಯ ವಿರುದ್ಧ ಆಧಾರರಹಿತ ಆರೋಪವಾಗಿದೆ. ಇದರಿಂದ ಜನರ ಮನಸ್ಸಿನಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಅಭಿಪ್ರಾಯ ಮೂಡಿಸುವಂತಿದೆ” ಎಂದು ಬಿಜೆಪಿ ಸೂಕ್ತ ಕ್ರಮಕ್ಕೆ ಕೋರಿದೆ.

ಈ ಸುದ್ದಿ ಓದಿದ್ದೀರಾ? ‘ಸಾಮ್ರಾಟ’ನ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಪದ್ಮನಾಭನಗರದಿಂದ ಪಿಜಿಆರ್ ಕಣಕ್ಕೆ?

ಸುರ್ಜೇವಾಲಾ ವಿರುದ್ಧ ದೂರು

“ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕರ್ನಾಟಕ ಚುನಾವಣೆ ಸಂಬಂಧ ನೀಡಿದ ಹೇಳಿಕೆಯಲ್ಲಿ “ಬಿಜೆಪಿಯ 40% ಸರ್ಕಾರ ರಾಜ್ಯವನ್ನು ನಿರ್ಲಜ್ಜವಾಗಿ ಲೂಟಿ ಮಾಡುತ್ತಿದೆ” ಎಂಬುದಾಗಿ ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿ ಮತದಾರರಲ್ಲಿ ತಪ್ಪು ಮಾಹಿತಿ ನೀಡಿ, ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಸುರ್ಜೇವಾಲಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕೋರಲಾಗಿದೆ” ಎಂದು ಬಿಜೆಪಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸಿ ಆದೇಶವನ್ನು ‘ತೀವ್ರವಾಗಿ ವಿರೋಧಿಸುತ್ತಲೇ’ ಹೊಸ ಹೆಸರು, ಚಿಹ್ನೆಗಳ ಪಟ್ಟಿ ಸಲ್ಲಿಸಿದ ಟಿಎಂಸಿ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಮುಂಬರುವ ಉಪಚುನಾವಣೆಗಾಗಿ ಟಿಎಂಸಿ ಪಕ್ಷದ ಹೆಸರು ಹಾಗೂ...

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ...