ಬಜೆಟ್‌ನಲ್ಲಿ ಪ್ರಣಾಳಿಕೆಗೆ ಒತ್ತು ನೀಡದೆ ಓಲೈಕೆ ರಾಜಕಾರಣ ಮಾಡಲಾಗಿದೆ: ಬಿಜೆಪಿ ಆರೋಪ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್‌ ಕುರಿತು ಪ್ರತಿಕ್ರೀಯೆ ನೀಡಿರುವ ಬಿಜೆಪಿ, “ಜನರಿಗೆ ಸುಳ್ಳು ಹೇಳಿ, ನಂಬಿಕೆ ದ್ರೋಹವೆಸಗುವುದು ಕೈ ಪಕ್ಷದ ಡಿಎನ್‌ಎ ಯಲ್ಲಿ ಅಡಕವಾಗಿದೆ” ಎಂದು ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, “ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪ್ರಕಟಿಸಿದ್ದ “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಪ್ರಣಾಳಿಕೆಯು ಸಂಪೂರ್ಣ ಸುಳ್ಳಿನ ಕೂಪವಾಗಿದೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಯಾವ ಅಂಶಗಳಿಗೂ ಒತ್ತು ನೀಡದೇ, ಕೇವಲ ಓಲೈಕೆ ರಾಜಕಾರಣಕ್ಕೆ ಮಾತ್ರ ಭರಪೂರ ಅನುದಾನ ನೀಡಿದ್ದಾರೆ” ಎಂದು ಆರೋಪಿಸಿದೆ.

“ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕಾಗಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಅಗಸದಷ್ಟು ಆಶ್ವಾಸನೆಯನ್ನು ಕಾಂಗ್ರೆಸ್ ನೀಡಿತ್ತು. ಆದರೆ, ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಹಿಂದುಳಿದ ಮತ್ತು ಶೋಷಿತ ವರ್ಗಗಳನ್ನು ಕಡೆಗಣಿಸಿ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿ, ₹100 ಕೋಟಿ ಅನುದಾನ ನೀಡಿದ್ದಾರೆ” ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

Advertisements

“ಕೋಲಾರದ ಕನಸು ಕಂಡಿದ್ದ ವರುಣಾ ಪುತ್ರ ಮಹಿಳೆಯರ ಮತಗಳ ಆಸೆಗಾಗಿ ರಾಜ್ಯದ ಎಲ್ಲ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡುತ್ತೇವೆಂದು ಹೇಳಿದ್ದರು. ಆದರೆ, ಗೆದ್ದ ಬಳಿಕ ಅವರು ಮಂಡಿಸಿದ ಪ್ರಥಮ ಬಜೆಟ್ ನಲ್ಲಿ, ಸ್ತ್ರೀ ಸಬಲೀಕರಣಕ್ಕೆ ಯಾವುದೇ ಅಂಶಗಳನ್ನು ಒದಗಿಸದೇ, ನಾಡಿನ ಸ್ತ್ರೀ ಸಮುದಾಯವನ್ನು ವಂಚಿಸಿದ್ದಾರೆ” ಎಂದು ಬಿಜೆಪಿ ದೂರಿದೆ.

ಈ ಸುದ್ದಿಓದಿದ್ದೀರಾ? ಕೇಂದ್ರ ಸರ್ಕಾರದಿಂದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ

“ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮಾಸಿಕ ವೇತನ ಹೆಚ್ಚಳ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ, ಒ.ಪಿ.ಎಸ್ ಜಾರಿ, ಹೀಗೆ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಜಾರಿಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಒಂದು ಬಿಡಿಗಾಸು ಸಹ ಮೀಸಲಿಟ್ಟಿಲ್ಲ. ಜನರಿಗೆ ಸುಳ್ಳು ಹೇಳಿ, ನಂಬಿಕೆ ದ್ರೋಹವೆಸಗುವುದು ಕೈ ಪಕ್ಷದ ಡಿಎನ್‌ಎ ಯಲ್ಲಿ ಅಡಕವಾಗಿದೆ” ಎಂದು ಟೀಕಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X