ಲೋಕಸಭೆ ಚುನಾವಣೆ ಗೆಲ್ಲಲು ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕಿದ ಕಾಂಗ್ರೆಸ್‌: ಬಿಜೆಪಿ ಆರೋಪ

Date:

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕೋಮುಗಲಭೆ, ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವ ಕೆಲಸಗಳಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement -

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “ರಾಜ್ಯದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಮುಂದಿರುವ ಕಾರ್ಯತಂತ್ರಗಳು; ಕೋಮುಗಲಭೆ ಸೃಷ್ಟಿಸುವುದು, ದೇಶ ವಿಭಜನೆಯ ಚರ್ಚೆ ಹುಟ್ಟು ಹಾಕುವುದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು, ವಾಕ್‌ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು, ಐಟಿ ಸೆಲ್‌ಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸುವುದು, ಭಾರತೀಯ ಪರಂಪರೆಯನ್ನು ಅವಮಾನಿಸುವುದು” ಎಂದು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ದೇಶದಲ್ಲಿ ಮತ್ತೊಮ್ಮೆ ಬಿಜೆಪಿಗೆ ದಾಖಲೆಯ 400 ಸ್ಥಾನಗಳು ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ. ಆದರೂ ಕಾಂಗ್ರೆಸ್ಸಿನವರು ಅಭಿವೃದ್ಧಿ ಮಾಡುವುದು ಬಿಟ್ಟು ದಿಗಿಲು ಬಡಿದ ಮಂಗಗಳಂತೆ ಸರ್ಕಸ್‌ ಮಾಡುತ್ತಿದ್ದಾರೆ” ಎಂದು ಲೇವಡಿ ಮಾಡಿದೆ.

“ತಿಲಕ ಕಂಡರೆ ಭಯ, ಕೇಸರಿ ಕಂಡರೆ ಕಳವಳ, ಹನುಮ ಧ್ವಜ ಕಂಡರೆ ಭೀತಿ, ರಾಮಮಂದಿರ ಎಂದರೆ ಕಿರಿಕಿರಿ, ಹಿಂದೂಗಳು ಎಂದರೆ ದ್ವೇಷ ಸಾಧಿಸುವ ಕಲೆಯನ್ನು ಇತ್ತೀಚೆಗೆ ಭಯಾನಕವಾಗಿ ರೂಢಿಸಿಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದೆ.

“ಸಿಎಂ ಸಿದ್ದರಾಮಯ್ಯ ಸಾಹೇಬರಿಗೆ ಟೋಪಿ ಕಂಡರೆ ಇರುವ ವ್ಯಾಮೋಹ ಹಿಂದೂ ನಂಬಿಕೆಗಳ ಮೇಲೆ ಇಲ್ಲದೆ ಇರುವುದು ಹಿಂದೂಗಳಿಗೆ ಮಾಡುತ್ತಿರುವ ದ್ರೋಹ, ವಂಚನೆ!. ಚುನಾವಣೆಗೂ ಮುನ್ನ ಟೆಂಪಲ್ ರನ್ ಮಾಡಿದ ನಕಲಿ ಹಿಂದೂ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆದ ಕೂಡಲೇ ಹಿಂದೂಗಳ ಮೇಲೇಕೆ ಇಷ್ಟೊಂದು ದ್ವೇಷ ಕಾರುತ್ತಿದಾರೆ ಎನ್ನುವ ಪ್ರಶ್ನೆ ನಾಡಿನ ಜನತೆಯನ್ನು ಕಾಡುತ್ತಿದೆ!” ಎಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...