ತಾಲಿಬಾನಿ ಮನಸ್ಥಿತಿಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹತ್ಯೆಗಳು ಹೆಚ್ಚಾಗಿವೆ: ಸಿ ಟಿ ರವಿ

Date:

“ಯುವ ಬ್ರಿಗೇಡ್‌ ತಾಲೂಕು ಸಂಚಾಲಕ ವೇಣುಗೋಪಾಲ್‌ ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ನಂಟು ಇದೆ. ಹೀಗಾಗಿ ನ್ಯಾಯಸಮ್ಮತ ತನಿಖೆ ನಡೆಸಬೇಕು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದರು.

- Advertisement -

ಮೈಸೂರು ಜಿಲ್ಲೆ ತಿ. ನರಸೀಪುರದಲ್ಲಿ ಕಳೆದ ಭಾನುವಾರ ಕೊಲೆಯಾಗಿದ್ದ ಯುವ ಬ್ರಿಗೇಡ್ ಸಂಘಟನೆಯ ತಾಲೂಕು ಸಂಚಾಲಕ ವೇಣುಗೋಪಾಲ್‌ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಸದಸ್ಯರ ತಂಡವು ಮಂಗಳವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ತಾಲಿಬಾನಿ ಮನಸ್ಥಿತಿಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಈ ರೀತಿಯ ಹತ್ಯೆಗಳು ಹೆಚ್ಚಾಗಿವೆ. ಹಿಂದುತ್ವದ ಪರವಾಗಿ ಮಾತನಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

“ಜೈನಮುನಿ ಕಾಮಕುಮಾರ ನಂದಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರವು ವ್ಯವಸ್ಥಿತವಾಗಿ ದಿಕ್ಕು ತಪ್ಪಿಸುತ್ತಿದೆ. ಜೈನ ಮುನಿ ಸಾಲ ನೀಡಿದ ವಿಚಾರಕ್ಕೆ ಹತ್ಯೆ ನಡೆದಿದೆ ಎಂದು ಬಿಂಬಿಸಲಾಗುತ್ತಿದೆ. ದಿನಕ್ಕೆ ಒಂದು ಹೊತ್ತು ತಿನ್ನುವ, ಅನ್ಯರಿಗೆ ದಾನ ಮಾಡುವ ಮನಸ್ಥಿತಿಯ ಮುನಿಗಳು ಬಡ್ಡಿ ವ್ಯವಹಾರ ಮಾಡಲು ಸಾಧ್ಯವೇ” ಎಂದು ಪ್ರಶ್ನಿಸಿದರು.

ಹತ್ಯೆ ಆರೋಪಿಗಳಲ್ಲಿ ಒಬ್ಬರು ಮೈಸೂರು ಮಹಾನಗರ ಪಾಲಿಕೆಯ ಸದಸ್ಯರ ಸಹೋದರ ಎಂಬ ಮಾಹಿತಿ ಕುರಿತು ಪ್ರತಿಕ್ರಿಯೆ ನೀಡಿ, “ಆರೋಪಿಗಳು ಯಾರೇ ಆಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಆ ಆರೋಪಿ ತಂದೆ ಕೂಡ ಕಾಂಗ್ರೆಸ್‌ ಮುಖಂಡರು” ಎಂದು ಸಿ ಟಿ ರವಿ ಹೇಳಿದರು.

ನಿಯೋಗದಲ್ಲಿ ಶಾಸಕ ಡಾ. ಸಿ ಎನ್ ಅಶ್ವತ್ಥನಾರಾಯಣ, ಶ್ರೀವತ್ಸ ಹಾಗೂ ಬಿಜೆಪಿ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...