ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು, ಮುಖ್ಯಮಂತ್ರಿ ಮನೆಗೆ ಯುವ ಮೋರ್ಚಾ ಮುತ್ತಿಗೆ

Date:

Advertisements

ಮುಡಾ ಪ್ರಕಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಮಾಡಿ, ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ಬೆಂಗಳೂರು ಮಹಾನಗರ, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ಚಾಮರಾಜನಗರ, ಮೈಸೂರು, ಬಳ್ಳಾರಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾಸನ, ಹುಬ್ಬಳ್ಳಿ- ಧಾರವಾಡ ಮಹಾನಗರ, ಮಂಡ್ಯ, ತುಮಕೂರು, ದಾವಣಗೆರೆ, ಬಿಜೆಪಿ ಜಿಲ್ಲಾ ಕೇಂದ್ರದಲ್ಲಿ ಮಂಗಳವಾರ ಪ್ರತಿಭಟನೆ ನಡೆದಿದೆ.

ಬುಧವಾರ ಕೂಡ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಸಿಎಂ ಮನೆಗೆ ಮತ್ತಿಗೆ ಹಾಕುವ ಪ್ರಯತ್ನ ನಡೆಯಿತು. ಬಿಜೆಪಿ ಕಚೇರಿಯಿಂದ ತೆರಳಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಸ್ತೆಯುದ್ದಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕುಮಾರ ಕೃಪ ಅತಿಥಿಗೃಹಕ್ಕೆ ತರಳಿ ಗೇಟ್‌ ಮೇಲೆ ಹತ್ತಿ ಪ್ರತಿಭಟಿಸಿದರು.

Advertisements

ಪೊಲೀಸರು ಮೊದಲೇ ಗೇಟ್‌ ಬಳಿ ನಿಂತಿದ್ದರಿಂದ ಪ್ರತಿಭಟನಾಕಾರರು ಒಳಬರಲು ಆಗಲಿಲ್ಲ. ನಂತರ ಬಿಜೆಪಿ ಕಾರ್ಯಕರ್ತರ ಕೂಗಾಟ ಹೆಚ್ಚಾಗುತ್ತಿದ್ದಂತೆ ಪೊಲೀಸ್‌ ವಾಹನದಲ್ಲಿ ಬಂಧಿಸಿ ಕರೆದೊಯ್ದರು.

ಸಿಎಂ ರಾಜೀನಾಮೆ ನೀಡಲಿ: ವಿಜಯೇಂದ್ರ

“ಮುಖ್ಯಮಂತ್ರಿಗಳು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಮುಖ್ಯಮಂತ್ರಿಗಳು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ರಾಜ್ಯದ ಜನರ ಅಭಿಪ್ರಾಯಕ್ಕೆ ನೀವು ಮನ್ನಣೆ ನೀಡಬೇಕು. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ನೀಡಿದ್ದು, ಇದರಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತಮ್ಮ ಭಂಡತನ ಬದಿಗಿಟ್ಟು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

ಬಿಜೆಪಿ ಕಚೇರಿ ಬಳಿ ಮಾತನಾಡಿ, “ಹೈಕೋರ್ಟ್ ತನ್ನ ತೀರ್ಪಿನಲ್ಲಿ ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ ಇಷ್ಟು ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯ ಇರಲಿಲ್ಲ. ಕಾನೂನಿನ ಪ್ರಕಾರ ಕೇವಲ 4600 ಚದರಡಿ ನಿವೇಶನ ಸಿಗಬೇಕಿತ್ತು. ಇವರಿಗೆ 56 ಕೋಟಿ ಬೆಲೆಬಾಳುವ 14 ನಿವೇಶನಗಳು ಸಿಕ್ಕಿರುವುದು ಕಾನೂನುಬಾಹಿರವಾಗಿದೆ. ಇವೆಲ್ಲವುಗಳ ಸಮಗ್ರ ತನಿಖೆ ಆಗಬೇಕಿದೆ ಎಂಬ ವಿಚಾರವನ್ನು ಹೈಕೋರ್ಟ್ ತಿಳಿಸಿದೆ” ಎಂದರು.

“ಹೈಕೋರ್ಟ್ ತೀರ್ಪಿನ ನಂತರ ಸಿಎಂ ಹೇಳಿಕೆಯನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿಗಳು ತಮ್ಮ ಭಂಡತನದಿಂದ ಇನ್ನೂ ಹೊರಕ್ಕೆ ಬರುತ್ತಿಲ್ಲ. ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ರಾಜಭವನ ದುರುಪಯೋಗ ಆಗುತ್ತಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಮತ್ತೊಂದು ಕಡೆ ತಾನೇನೂ ತಪ್ಪು ಮಾಡಿಲ್ಲ; ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿದ್ದಾರೆ” ಎಂದು ಆಕ್ಷೇಪಿಸಿದರು.

“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಹೈಕೋರ್ಟ್ ತೀರ್ಪು ಸ್ಪಷ್ಟವಾಗಿ ಹೇಳಿದೆ. ಯಾವ ರೀತಿ ಭ್ರಷ್ಟಾಚಾರ ಆಗಿದೆ; ಯಾವ ರೀತಿ ಅಧಿಕಾರ ದುರುಪಯೋಗ ಆಗಿದೆ, ಮೇಲ್ನೋಟಕ್ಕೆ ಇದರ ತನಿಖೆ ಆಗಬೇಕಿದೆ ಎಂದು ಹೈಕೋರ್ಟ್ ಹೇಳಿದರೂ, ಇವೆಲ್ಲವನ್ನೂ ರಾಜಕೀಯಪ್ರೇರಿತ ಎಂದು ಬಿಂಬಿಸುವ ಕೆಲಸವನ್ನು ತಾವು ಮಾಡಿದ್ದೀರಿ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X