ಅಘೋಷಿತ ತುರ್ತು ಪರಿಸ್ಥಿತಿ | ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ಬಿಜೆಪಿ ಪಿತೂರಿ: ಶರದ್ ಪವಾರ್

Date:

Advertisements

ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಕೇಂದ್ರ ಸಚಿವ, ಎನ್‌ಸಿಪಿ ನಾಯಕ ಶರದ್ ಪವಾರ್, “ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಡಾ. ಬಿ. ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಾಶ ಮಾಡುವ ಪಿತೂರಿ ನಡೆಯುತ್ತಿದೆ” ಎಂದು ಆರೋಪಿಸಿದರು.

ವರ್ದಾ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಅಮರ್ ಕಾಳೆ ಪರ ಪ್ರಚಾರದಲ್ಲಿ ಮಾತನಾಡಿದ ಶರದ್ ಪವಾರ್, “ಬಿಜೆಪಿ ನಮ್ಮ ದೇಶವನ್ನು ನಾಶ ಮಾಡುತ್ತಿದೆ. ಸ್ವತಂತ್ರ್ಯ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಕೂಡಾ ನಾಶ ಮಾಡುತ್ತಿದೆ. ನಮ್ಮ ಸಂವಿಧಾನ ಜನರಿಗೆ ನೀಡಿದ ಹಕ್ಕುಗಳ ರಕ್ಷಣೆ ಮಾಡಬೇಕಾದರೆ ಚುನಾವಣೆ ಅತೀ ಮುಖ್ಯವಾಗುತ್ತದೆ” ಎಂದು ಹೇಳಿದರು.

“ಅಘೋಷಿತ ತುರ್ತು ಪರಿಸ್ಥಿತಿ ನಮ್ಮ ದೇಶದಲ್ಲಿದೆ. ಈ ಸಂದರ್ಭದಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ರಚಿತ ಸಂವಿಧಾನವನ್ನು ನಾಶ ಮಾಡುವ ಸಿದ್ಧಾಂತ ಹೊಂದಿರುವ ಬಿಜೆಪಿ-ಆರ್‌ಎಸ್‌ಎಸ್ ಅನ್ನು ನಾವು ಸೋಲಿಸುವು ಅನಿವಾರ್ಯ, ಅಗತ್ಯ. ನಾವು ಅಲ್ಪಸಂಖ್ಯಾತರು ಸೇರಿದಂತೆ ದೇಶದ ಎಲ್ಲರ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದೆ” ಎಂದು ಕರೆ ನೀಡಿದರು.

Advertisements

ಇದನ್ನು ಓದಿದ್ದೀರಾ?  ನಿಮ್ಮದು ಬೇರೆ ಪಕ್ಷ, ಶರದ್ ಪವಾರ್ ಚಿತ್ರ, ಚಿಹ್ನೆ ಬಳಸುವುದೇಕೆ?; ಅಜಿತ್‌ ಬಣಕ್ಕೆ ಸುಪ್ರೀಂ ಪ್ರಶ್ನೆ

“ಅಧಿಕಾರದಲ್ಲಿರುವ ಬಿಜೆಪಿಯು ವಿಪಕ್ಷಗಳ ಮೇಲೆ ದಾಳಿ, ದೌರ್ಜನ್ಯ ನಡೆಸಲು ತಮ್ಮ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ಸರ್ಕಾರವನ್ನು ವಿರೋಧಿಸಿದವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಿದ ಜಾರ್ಖಾಂಡ್ ಮುಖ್ಯಮಂತ್ರಿಯವರನ್ನು ಬಂಧಿಸಲಾಗಿದೆ” ಎಂದು ದೂರಿದರು.

ಇನ್ನು “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ಬೆಂಬಲ ನೀಡುತ್ತಿದ್ದರು. ಆದರೂ ಕೂಡಾ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಅವರ ರಾಜಕೀಯ ನಿಲುವು ಇಷ್ಟವಿಲ್ಲ. ಅದಕ್ಕಾಗಿ ಈಗ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್‌ ಅವರ ಸಂಪುಟದ ಮೂವರು ಸಚಿವರನ್ನೂ ಕೂಡಾ ಬಂಧಿಸಲಾಗಿದೆ” ಎಂದು ಹೇಳಿದರು.

“ಲೋಕಸಭೆ ಚುನಾವಣೆಯು ಹಲವಾರು ರೀತಿಯಲ್ಲಿ ಅತೀ ಮುಖ್ಯವಾಗಿದೆ. ಬದಲಾಗುತ್ತಿರುವ ಸಂವಿಧಾನದ ಉಳಿವಿಗಾಗಿ, ಜನರ ಹಿತಾಸಕ್ತಿ ರಕ್ಷಣೆಗಾಗಿ, ಹೀಗೆ ಬೇರೆ ಬೇರೆ ರೀತಿಯಲ್ಲಿ ಲೋಕಸಭೆ ಚುನಾವಣೆ ಅತೀ ಮುಖ್ಯ” ಎಂದು ಶರದ್ ಪವಾರ್ ಅಭಿಪ್ರಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X