ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಬಿಜೆಪಿಗೆ ಇಷ್ಟವಿಲ್ಲ: ಡಿ ಕೆ ಶಿವಕುಮಾರ್

Date:

Advertisements

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ. ಆದರೆ ಬಿಜೆಪಿಗೆ ಆ ಬಗ್ಗೆ ಚರ್ಚೆ ನಡೆಸುವುದು ಇಷ್ಟವಿಲ್ಲ. ಸುಮ್ಮನೇ ರಾಜಕಾರಣ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಈ ಬಗ್ಗೆ ಭಾನುವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಉತ್ತರ ಕರ್ನಾಟಕದ ನೀರಾವರಿ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ನಾವು ಚರ್ಚೆ ನಡೆಸಿ ಒಂದು ಪರಿಹಾರವನ್ನು ಕಾಣಬೇಕು. ಆದರೆ ಬಿಜೆಪಿಯವರು ಮಾತ್ರ ಒಗ್ಗಟ್ಟಿನಲ್ಲಿಲ್ಲ. ಅವರಲ್ಲೇ ಪರಸ್ಪರ ಮನಸ್ತಾಪಗಳಿವೆ. ಈ ಸಮಸ್ಯೆ ಬಗ್ಗೆ ಚರ್ಚಿಸುವ ಮನಸೇ ಅವರಲ್ಲಿ ಇಲ್ಲ” ಎಂದರು.

ಇದನ್ನು ಓದಿದ್ದೀರಾ? ಪ್ರತಿಯೊಬ್ಬ ಕಾಂಗ್ರೆಸಿಗನೂ ಐತಿಹಾಸಿಕ ಬೆಳಗಾವಿ ಅಧಿವೇಶನ ಶತಮಾನೋತ್ಸವಕ್ಕೆ ಸಾಕ್ಷಿಯಾಗಲಿ: ಡಿ ಕೆ ಶಿವಕುಮಾರ್

Advertisements

“ನಮ್ಮ ಸರ್ಕಾರ ಯೋಜನೆ ಜಾರಿಗೆ ಬದ್ಧವಿದೆ. ಈಗಾಗಲೇ ಟೆಂಡರ್ ಕರೆಯುವ ಎಲ್ಲ ಸಿದ್ಧತೆ ಮಾಡಲಾಗಿದೆ. ಈ ಯೋಜನೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ನೀಡುವ ಭರವಸೆ ನಮಗಿದೆ. ಅನುಮತಿ ದೊರೆತ ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು” ಎಂದು ತಿಳಿಸಿದರು.

“ಉತ್ತರ ಕರ್ನಾಟಕದ ನೀರಾವರಿ ಸಮಸ್ಯೆ ಯೋಜನೆ ಅನುಷ್ಠಾನದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದ ಜಗದೀಶ್ ಶೆಟ್ಟರ್ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಯೋಜನೆ ಪ್ರಕ್ರಿಯೆಯ ಪ್ರತಿಯೊಂದು ಹಂತವನ್ನೂ ಅವರು ಸಂಭ್ರಮಿಸಿದ್ದರು. ನಾವು ಅವರನ್ನೂ ಭೇಟಿ ಮಾಡಿ ಮನವಿ ಮಾಡಿದ್ದೆವು. ಅವರೂ ಕೂಡಾ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆರಬೇಕು” ಎಂದು ಡಿಕೆಶಿ ಅಭಿಪ್ರಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X