ರಾಜ್ಯದ ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಸುಳ್ಳು ಜಾಹೀರಾತು, ಕ್ರಮಕ್ಕೆ ಚಿಂತನೆ:‌ ಸಚಿವ ಪರಮೇಶ್ವರ್

Date:

Advertisements

ಮಹಾರಾಷ್ಟ್ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ ಬಳಿಕ ಬಿಜೆಪಿಯವರು ‘ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಂಡಿಲ್ಲ. ಮಹಾರಾಷ್ಟ್ರದಲ್ಲಿಯೂ ಅನುಷ್ಟಾನವಾಗುವುದಿಲ್ಲ’ ಎಂದು ಸುಳ್ಳು ಜಾಹೀರಾತು ನೀಡಿದ್ದಾರೆ. ಇದಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಯೋಚಿಸುತ್ತಿದ್ದೇವೆ” ಎಂದರು.

“ನಮ್ಮ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ 56 ಸಾವಿರ ಕೋಟಿ ರೂ. ಮೀಸಲಿಟ್ಟು,
ಸಂಪೂರ್ಣವಾಗಿ ಅನುಷ್ಠಾನಗೊಳಿಸಿದೆ. ಇದಕ್ಕೆ ವಿರುದ್ಧವಾಗಿ ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಿದ್ದಾರೆ ಎಂದರೆ ನಾವು ಖಂಡಿತವಾಗಿ ಸಹಿಸುವುದಿಲ್ಲ. ಸಂಬಂಧಪಟ್ಟ ಐದು ಇಲಾಖೆಗಳು ಜಾಹೀರಾತು ನೀಡಿದವರ ಮೇಲೆ ಕ್ರಮ ತೆಗೆದುಕೊಳ್ಳಲು ದೂರು ನೀಡಬೇಕಾಗುತ್ತದೆ‌” ಎಂದು ಹೇಳಿದರು.

Advertisements

“ತುಮಕೂರಿನಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಮ್ಮಿಕೊಂಡಿಲ್ಲ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಅನೇಕ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುತ್ತದೆ. ಇದೇ ರೀತಿ ಎಂಟು ತಿಂಗಳ ಹಿಂದೆಯೂ ಕಾರ್ಯಕ್ರಮ ಮಾಡಲಾಗಿತ್ತು” ಎಂದು ತಿಳಿಸಿದರು‌.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

“ಬಿಜೆಪಿ ಮತ್ತು ಜೆಡಿಎಸ್‌ನವರು ಸರ್ಕಾರದಲ್ಲಿ ಅನುದಾನವಿಲ್ಲ, ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಜನರಲ್ಲಿ ತಪ್ಪು ಮಾಹಿತಿಯನ್ನು ಹೇಳಿಕೊಂಡು ಬರುತ್ತಿದ್ದಾರೆ. ಎಲ್ಲ ಇಲಾಖೆಗಳಿಗೆ ಅನುದಾನ ಕೊಟ್ಟಿದ್ದೇವೆ. ಯೋಜನೆಗಳನ್ನು ಜನಸಮುದಾಯಕ್ಕೆ ತಲುಪಿಸುತ್ತಿದ್ದೇವೆ ಎಂಬ ಸಂದೇಶ ಈ ಕಾರ್ಯಕ್ರಮದಿಂದ ಹೋಗುತ್ತದೆ” ಎಂದರು‌.

“ಕಳೆದೊಂದು ವಾರದಿಂದ ನಕ್ಸಲ್ ಚಟುವಟಿಕೆಗಳ ಮೇಲೆ ಪೊಲೀಸರು ಮೇಲೆ ನಿಗಾವಹಿಸಿದ್ದರು‌. ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ಕೂಂಬಿಂಗ್ ವೇಳೆ ಮಾಹಿತಿ ಆಧರಿಸಿ ಕಾರ್ಯಾಚರಣೆ ಮುಂದುವರಿಸಿದ್ದರು. ಕಾರ್ಯಾಚರಣೆ ವೇಳೆ ಪೊಲೀಸರು ಕಂಡ ತಕ್ಷಣ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎನ್‌ಕೌಂಟರ್ ಮಾಡಬೇಕಾದ ಪರಿಸ್ಥಿತಿ ಬಂದಿತ್ತು. ಇನ್ನು ಇಬ್ಬರು ಮೂವರು ತಪ್ಪಿಸಿಕೊಂಡಿದ್ದಾರೆ ಎಂಬುದು ಈವರೆಗಿನ ಮಾಹಿತಿ. ಹೆಚ್ಚಿನ ಮಾಹಿತಿ ಲಭ್ಯವಾದ ನಂತರ ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.

ಅನುದಾನ ವಿಚಾರವಾಗಿ ಶಾಸಕ ಗವಿಯಪ್ಪ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿ, “ಮುಖ್ಯಮಂತ್ರಿಯವರು ಕೆಕೆಆರ್‌ಡಿಬಿ ಹಣ ಬಿಡುಗಡೆ ಮಾಡಿದ್ದಾರೆ. ಅಜಯ್ ಸಿಂಗ್ ನೇತೃತ್ವದಲ್ಲಿ ಪ್ರತ್ಯೇಕವಾಗಿ ಸಭೆ ಸಭೆ ನಡೆಸಿದ್ದಾರೆ. ಪ್ರತ್ಯೇಕವಾಗಿ ಸಭೆ ಮಾಡಿ ಅಲೋಕೆಷನ್ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ. ಕೋವಿಡ್ ಅಕ್ರಮದ ಬಗ್ಗೆ ಜಸ್ಟೀಸ್ ಮೈಕಲ್ ಡಿ.ಕುನ್ಹಾ ಅವರು ಕೊಟ್ಟಿರುವ ವರದಿಯನ್ನು ಪರಿಶೀಲಿಸುತ್ತೇವೆ” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X