ಅಧಿವೇಶನ ಆರಂಭವಾಗಿ ವಾರ ಕಳೆದರೂ ವಿರೋಧ ಪಕ್ಷದ ನಾಯಕನ ನೇಮಕವಾಗದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ” ಎಂದು ಆರೋಪಿಸಿದ್ದಾರೆ.
“ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ. ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಬಿಜೆಪಿ” ಎಂದು ದೂರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜೈನಮುನಿ ಹತ್ಯೆ ಪ್ರಕರಣ | ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್