ಚುನಾವಣೆ 2023 | ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; 52 ಹೊಸ ಮುಖಗಳಿಗೆ ಮಣೆ

Date:

Advertisements

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕಡೆಗೂ ಬಿಡುಗಡೆಯಾಗಿದೆ. ಎರಡು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಜೆಪಿ, ಅದರಂತೆ ತನ್ನ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ರಿಲೀಸ್ ಮಾಡಿದೆ.

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ದೆಹಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಪಟ್ಟಿ ಬಿಡುಗಡೆ ಮಾಹಿತಿ ನೀಡಿದರು.

ಮೊದಲ ಬಾರಿಗೆ ಉತ್ತರ ಪ್ರದೇಶ ಮಾದರಿಯನ್ನು ರಾಜ್ಯಕ್ಕೆ ತಂದಿರುವ ಬಿಜೆಪಿ 52 ಹೊಸ ಮುಖಗಳಿಗೆ ಮನ್ನಣೆ ಹಾಕಿದೆ. ಗೆಲ್ಲುವ ಹಾಗೂ ಭ್ರಷ್ಟಾಚಾರ ರಹಿತ ಮುಖಗಳಿಗೆ ಪಕ್ಷ ಮಣೆ ಹಾಕಿ ಕ್ಲೀನ್ ಇಮೇಜ್ ಕಾಪಾಡಿಕೊಳ್ಳುವತ್ತ ಕಮಲಪಕ್ಷ ಗಮನ ಹರಿಸಿದೆ.

Advertisements

ಓಬಿಸಿ ಸಮಾಜಕ್ಕೆ 32, ಎಸ್‌ಸಿ 30, ಎಸ್‌ಟಿ 16 ಟಿಕೆಟ್‌ ನೀಡಿದೆ. ಹಾಗೆಯೇ ಎಂಟು ಮಂದಿ ಮಹಿಳೆಯರಿಗೆ ಟಿಕೆಟ್‌ ಘೋಷಿಸಲಾಗಿದೆ. 5 ವಕೀಲರು, 9 ವೈದ್ಯರು, ಶಿಕ್ಷಣ ತಜ್ಞರು 3, ನಿವೃತ್ತ ಐಎಎಸ್‌ ಅಧಿಕಾರಿ 1, ಐಪಿಎಸ್‌ ಅಧಿಕಾರಿ ಒಬ್ಬರಿಗೆ ಅವಕಾಶ ನೀಡಲಾಗಿದೆ.

ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ” ಎಂದರು.

ಟಿಕೆಟ್‌ ವಿವರ

ಶಿಗ್ಗಾಂವಿ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರಕ್ಕೆ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಸೇರಿದಂತೆ ಶಶಿಕಲಾ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ, ಗೋವಿಂದ ಕಾರಜೋಳ, ದುರ್ಯೋದನ ಐಹೊಳೆ, ಹಾಲಪ್ಪ ಆಚಾರ್‌, ಪಿ ರಾಜೀವ್‌, ಅನಿಲ್‌ ಮೆಣಸಿನಕಾಯಿ, ಸಿ ಸಿ ಪಾಟೀಲ್‌, ಶಂಕರ್‌ ಪಾಟೀಲ್‌ ಮುನೇನಕೊಪ್ಪ, ಎಂ ಆರ್‌ ಪಾಟೀಲ್‌ , ಅಮೃತ ದೇಸಾಯಿ, ಕ್ರಾಂತಿ ಕಿರಣ್‌, ಅರವಿಂದ್‌ ಬೆಲ್ಲದ್‌, ಸುನೀಲ್‌ ಹೆಗಡೆ, ಸುರೇಶ್‌ ನಾಯ್ಕ್‌ , ವಿಶ್ವೇಶ್ವರ್‌ ಹೆಗಡೆ ಕಾಗೇರಿ, ರಮೇಶ್‌ ಜಾರಕಿಹೋಳಿ, ಅಭಯ್‌ ಪಾಟೀಲ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಕಂಪ್ಲಿ- ಸುರೇಶ್‌ ಬಾಬು, ಬಳ್ಳಾರಿ- ಬಿ ಶ್ರೀರಾಮುಲು, ಸಂಡೂರು- ಶಿಲ್ಪಾ ನಾಗೇಂದ್ರ, ಮೊಳಕಾಲ್ಮೂರು- ತಿಪ್ಪೇಸ್ವಾಮಿ ಸೇರಿದಂತೆ ಉಳಿದ ಕ್ಷೇತ್ರಗಳಲ್ಲಿ ಅನಿಲ್‌ ಕುಮಾರ್‌, ತಿಪ್ಪಾರಡ್ಡಿ, ಎಂ ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್‌, ಎಂ ಪಿ ರೇಣುಕಾಚಾರ್ಯ, ಬಿ ಪಿ ಹರೀಶ್‌, ಆರಗ ಜ್ಷಾನೇಂದ್ರ, ಕುಮಾರ್‌ ಬಂಗಾರಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬಿಜೆಪಿ ಪಟ್ಟಿ ಈ ಕೆಳಗಿನಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X