ದೇಶದ ವಾಸ್ತವ ಸ್ಥಿತಿ ಮರೆಮಾಚಲು ಬಿಜೆಪಿ ಭ್ರಮೆ ಬಿತ್ತುತ್ತಿದೆ: ಪರಕಾಲ ಪ್ರಭಾಕರ್

Date:

Advertisements

ನಮ್ಮ ದೇಶವು ಶೇ. 24ರಷ್ಟು ಮಂದಿ ಯುವಜನತೆ ನಿರುದ್ಯೋಗಿಗಳಾಗಿದ್ದಾರೆ. ಇದು ಪ್ರಪಂಚದಲ್ಲೇ ಅತೀ ಹೆಚ್ಚು. ಆದರೆ ಕೇಂದ್ರ ಸರ್ಕಾರ ಈ ವಾಸ್ತವವನ್ನು ಮರೆಮಾಚಿ, ಆರ್ಥಿಕತೆಯಲ್ಲಿ ನಮ್ಮ ದೇಶ ಮುಂದುವರಿಯುತ್ತಿದೆ ಎಂಬ ಭ್ರಮೆ ಹರಡುತ್ತಿದೆ ಎಂದು ಖ್ಯಾತ ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ತಿಳಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕ ಆಯೋಜಿಸಿದ್ದ ‘2014ರ ನಂತರದ ಭಾರತ: ಭ್ರಮೆಯೇ ವಾಸ್ತವವಾಗಿʼ ಎಂಬ ವಿಚಾರದ ಕುರಿತು ಮಾತನಾಡಿದರು.

“ದೇಶದಲ್ಲಿ ಯುವಕರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ. ಇರಾನ್, ಲೆಬನಾನ್, ಸಿರಿಯಾ ದೇಶಗಳಿಗಿಂತೂ ಹೆಚ್ಚು ಜನ ನಿರುದ್ಯೋಗಿಗಳು ನಮ್ಮಲ್ಲಿದ್ದಾರೆ. ನಮ್ಮ ದೇಶದ ನಿರುದ್ಯೋಗದ ಪ್ರಮಾಣ 24ರಷ್ಟಾದರೆ, ನಮ್ಮ ನೆರೆಯ ರಾಷ್ಟ್ರ ಬಾಂಗ್ಲಾದೇಶದ ನಿರುದ್ಯೋಗದ ಪ್ರಮಾಣ 12 ಶೇ. ಅಂದರೆ ನಮ್ಮ ಅರ್ಧದಷ್ಟು. ಇದು ದೇಶದ ಜನರಿಗೆ ತಿಳಿಯದಂತೆ ವ್ಯವಸ್ಥಿತವಾಗಿ ಮರೆಮಾಚಲಾಗುತ್ತಿದೆ” ಎಂದು ತಿಳಿಸಿದರು.

Advertisements

ನಮ್ಮ ಹಣದುಬ್ಬರದ ದರ ತಾಳಿಕೊಳ್ಳಲು ಸಾಧ್ಯವಾಗದ ಮಟ್ಟಕ್ಕೆ ಏರಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಆಂತರಿಕ ಉಳಿತಾಯ ದರ ಶೇ.5ಕ್ಕಿಂತಲೂ ಕಡಿಮೆ ಇದೆ ಎಂದು ವಿವರಿಸಿದರು.

ಬಡತನ, ಹಸಿವಿನ ಸೂಚ್ಯಂಕ ಹೆಚ್ಚಾಗುತ್ತಿದೆ. ಆದರೆ ಈ ವಾಸ್ತವಾಂಶಗಳನ್ನು ಸರ್ಕಾರ ವ್ಯವಸ್ಥಿತವಾಗಿ ಮರೆಮಾಚುತ್ತಿದೆ. ಭಾರತ ಜಗತ್ತಿನಲ್ಲೇ ಮುಂದುವರಿಯುತ್ತಲಿರುವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂಬ ಭ್ರಮೆಯನ್ನು ವ್ಯವಸ್ಥಿತವಾಗಿ ತೇಲಿ ಬಿಡಲಾಗುತ್ತಿದೆ. ವಾಸ್ತವಗಳನ್ನು ದೇಶದ ಜನ ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ನಮ್ಮ ದೇಶ ಸಂಸದೀಯ ವ್ಯವಸ್ಥೆ ಹೊಂದಿದೆ. ಆದರೆ ಇಂದು ಕಾನೂನುಗಳನ್ನು ಯಾವುದೇ ಚರ್ಚೆಗಳಿಲ್ಲದೆಯೇ ಪಾಸ್ ಮಾಡಲಾಗುತ್ತಿದೆ. ಪ್ರಶ್ನಿಸಿದವರನ್ನು ಸಂಸತ್ತಿನಿಂದಲೇ ಅಮಾನತು ಮಾಡಲಾಗುತ್ತಿದೆ. ಮೂರು ಕರಾಳ ಕೃಷಿ ಕಾನೂನನ್ನು ದೇಶದಲ್ಲಿ ಜಾರಿಗೆ ತರಲಾಯಿತು. ರೈತರು ವಿರೋಧ ವ್ಯಕ್ತಪಡಿಸಿ, ನಿರಂತರ ಪ್ರತಿಭಟನೆ ನಡೆಸಿದ್ದರಿಂದ ಹಿಂದೆ ಪಡೆಯುವುದಾಗಿ ಪ್ರಧಾನಿಗಳು ಟಿವಿ ಮಾಧ್ಯಮದ ಪರದೆಯ ಮೂಲಕ ಘೋಷಿಸಿದರು. ಆ ಬಳಿಕ ಯಾವುದೇ ರೀತಿಯ ಚರ್ಚೆ ಇಲ್ಲದೆಯೇ ಸಂಸತ್ತಿನಲ್ಲಿ ವಾಪಸ್ ಪಡೆಯಲಾಯಿತು. ಕೃಷಿ ಕಾನೂನು ಜಾರಿಗೆ ತಂದ ಉದ್ದೇಶವಾಗಲೀ, ಹಿಂಪಡೆದ ಉದ್ದೇಶವಾಗಲೀ ಸರ್ಕಾರ ಈವರೆಗೆ ತಿಳಿಸಿಲ್ಲ. ಇದು ನಿಜಕ್ಕೂ ಅಪಾಯಕಾರಿ ಸನ್ನಿವೇಶ” ಎಂದು ಪರಕಾಲ ಪ್ರಭಾಕರ್ ಅಭಿಪ್ರಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X