ಬಿಜೆಪಿ, ಜೆಡಿಎಸ್‌ನವರು ಹಿಂದೂ ದೇವಾಲಯಗಳ ದೊಡ್ಡ ವಿರೋಧಿಗಳು: ಡಿ ಕೆ ಶಿವಕುಮಾರ್‌

Date:

Advertisements

“ಬಿಜೆಪಿಯವರದ್ದು ಮಾತೇ ಬೇರೆ, ಕೃತಿಯೇ ಬೇರೆ. ಅವರೇ ಹಿಂದೂ ದೇವಾಲಯಗಳ ದೊಡ್ಡ ವಿರೋಧಿಗಳು ಎನ್ನುವುದನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ವಿರೋಧಿಸುವ ಮೂಲಕ ಸಾಬೀತು ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ಮೇಲ್ಮನೆಯಲ್ಲಿ ಬಿದ್ದು ಹೋಗಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ” ಬಿಜೆಪಿಯವರು ರಾಜಕಾರಣ ಮಾಡಲಿ, ಮೂರು ತಿಂಗಳಲ್ಲಿ ನಮಗೆ ಮೆಜಾರಿಟಿ ಬರುತ್ತೆ, ಆವಾಗ ಈ ಬಿಲ್ ಅನ್ನು ವಿಧಾನ ಪರಿಷತ್ ನಲ್ಲಿ ಧ್ವನಿಮತದಿಂದ ಅಂಗೀಕರಿಸುತ್ತೇವೆ” ಎಂದರು.

“ನಮ್ಮ ಮುಜರಾಯಿ ಇಲಾಖೆಯ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಯವರು ದೂರದೃಷ್ಟಿಯಿಂದ ಜಾರಿಗೆ ತರಲು ಉದ್ದೇಶಿಸಲಾಗಿದ್ದ ಮಸೂದೆಯಿದು. ಬಿಜೆಪಿ ಮತ್ತು ಜೆಡಿಎಸ್ ನವರು ಪೂರ್ವಯೋಜಿತವಾಗಿ ಪ್ಲ್ಯಾನ್ ಮಾಡಿಕೊಂಡು ಮಸೂದೆಯನ್ನು ವಿಧಾನ ಪರಿಷತ್ ನಲ್ಲಿ ಸೋಲಿಸಿದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

“ನಮ್ಮ ಎರಡು ಗ್ಯಾರಂಟಿಯಿಂದಾಗಿ ಧಾರ್ಮಿಕ ಕೇಂದ್ರಗಳಲ್ಲಿ ಹಣ ಸಂಗ್ರಹ ಹೆಚ್ಚಾಗುತ್ತಿದೆ. ಹಳ್ಳಿಗಳಲ್ಲಿ ಇರುವ ದೇವಾಲಯಗಳಿಗೂ ಸಹಾಯ ಮಾಡಬೇಕು ಎನ್ನುವ ಉದ್ದೇಶದಿಂದ ಇದನ್ನು ಜಾರಿಗೆ ತರಲು ಉದ್ದೇಶಿಸಿದ್ದೆವು. ಇದರಿಂದ ದೇವಾಲಯವೂ ಅಭಿವೃದ್ದಿಯೂ ಆಗುತ್ತದೆ, ಅರ್ಚಕ ವೃಂದಕ್ಕೂ ಲಾಭವಾಗುತ್ತಿತ್ತು” ಎಂದು ಶಿವಕುಮಾರ್ ತಿಳಿಸಿದರು.

“ಸದ್ಯಕ್ಕೆ ನಮ್ಮ ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ. ಈ ಮಸೂದೆಯನ್ನು ಎರಡು ಪಾರ್ಟಿಯವರು ವಿರೋಧ ಮಾಡಿ ಬೀಳಿಸಿದ್ದಾರೆ. ಆದರೆ ಮಸೂದೆಯ ಭಾವನೆಯನ್ನು ಅರ್ಥವಾಗುತ್ತದೆ. ಹಳ್ಳಿಯಲ್ಲಿರುವ ದೇವರು ದೇವರಲ್ಲವೇ” ಎಂದು ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X