ಮಹಾರಾಷ್ಟ್ರ | ಮತದಾರರಿಗೆ ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ನಾಯಕ; ವಿಡಿಯೋ ವೈರಲ್

Date:

Advertisements

ನವೆಂಬರ್ 20ರಂದು ಬುಧವಾರ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚೆ (ಮಂಗಳವಾರ) ಮತದಾರರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಮತದಾರರಿಗೆ ಹಣ ಹಂಚಿದ್ದಾರೆ ಎಂದು ಬಹುಜನ ವಿಕಾಸ್ ಅಘಾಡಿ (ಬಿವಿಎ) ಆರೋಪಿಸಿದೆ. ಮತದಾರರಿಗೆ ಹಣ ಹಂಚುವಾಗ ವಿನೋದ್ ಅವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಬಿವಿಎ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ವಿನೋದ್‌ ಆರೋಪವನ್ನು ನಿರಾಕರಿಸಿದ್ದಾರೆ. ಹಣ ಹಂಚಿಕೆಯ ವಿಡಿಯೋ ವೈರಲ್ ಆಗಿದೆ.

“ವಸಾಯಿ-ವಿರಾರ್ ಕ್ಷೇತ್ರದಲ್ಲಿ ತಾವ್ಡೆ ಹಣ ಹಂಚಿದ್ದಾರೆ. ತಾವ್ಡೆ ಅವರ ಬಳಿಯಿದ್ದ ಬ್ಯಾಗ್‌ನಲ್ಲಿ 15 ಕೋಟಿ ರೂಪಾಯಿ ಹಣವನ್ನು ಮತದಾರರಿಗೆ ವಿತರಿಸಿರುವ ಡೈರಿ ಇತ್ತು. ಅವರು ಕ್ಷೇತ್ರಕ್ಕೆ 5 ಕೋಟಿ ರೂಪಾಯಿ ನಗದು ಜೊತೆ ಬಂದಿದ್ದಾರೆ” ಎಂದು ಬಿವಿಎ ಶಾಸಕ ಹಿತೇಂದ್ರ ಠಾಕೂರ್ ಆರೋಪಿಸಿದ್ದಾರೆ.

ಸೋಮವಾರ ಸಂಜೆ, ಅವರನ್ನು ಬಿವಿಎ ಕಾರ್ಯಕರ್ತರು ತಡೆದು, ಘೇರಾವ್ ಹಾಕಿದ್ದಾರೆ. ಡೈರಿಯನ್ನು ವಶಕ್ಕೆ ಪಡೆದುಕೊಳ್ಳಲು ಯತ್ನಿಸಿದ್ದಾರೆ. ಆದರೆ, ನಲಸೋಪಾರದ ಹಾಲಿ ಶಾಸಕ ಕ್ಷಿತಿಜ್ ಠಾಕೂರ್ ಅವರು ಡೈರಿಯನ್ನು ಕಿತ್ತುಕೊಂಡಿದ್ದಾರೆ. ಇದೆಲ್ಲವೂ ಹೋಟೆಲ್‌ನಲ್ಲಿ ನಡೆದಿದೆ. ಆದರೆ, ಹೋಟೆಲ್‌ ತನ್ನ ಸಿಸಿಟಿವಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂದು ಹೇಳಿಕೊಂಡಿದೆ. ಹಣ ವಿತರಣೆಯ ಫೂಟೆಜ್‌ಗಳನ್ನು ಮುಚ್ಚಿಹಾಕಲು ಇಂತಹ ಹೇಳಿಕೆ ನೀಡಿದೆ. ಹೋಟೆಲ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಿವಿಎ ಒತ್ತಾಯಿಸಿದೆ.

Advertisements

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ ಬಣ) ಅಧ್ಯಕ್ಷ ಉದ್ಧವ್ ಠಾಕ್ರೆ, ”ನಾನು ತುಳಜಾ ಭವಾನಿ ದೇವಿಯ ದರ್ಶನಕ್ಕಾಗಿ ವಸಾಯಿ-ವಿರಾರ್‌ಗೆ ಬಂದಿದ್ದೆ. ಆಗ ನನ್ನ ಬ್ಯಾಗ್‌ಗಳನ್ನು ಪರಿಶೀಲಿಸಲಾಯಿತು. ಆದರೆ, ಅವುಗಳಲ್ಲಿ ಏನೂ ಸಿಗಲಿಲ್ಲ. ವಿನೋದ್ ತಾವ್ಡೆ ಅವರ ಬ್ಯಾಗ್‌ಗಳಲ್ಲಿ ನಗದು ಪತ್ತೆಯಾಗಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಇದನ್ನೆಲ್ಲ ಯಾರು ಪರಿಶೀಲಿಸಬೇಕಿತ್ತು? ಹಾಗಾಗಿ ಈ ಭ್ರಷ್ಟ ಸರ್ಕಾರ ಬೇಗ ತೊಲಗಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ” ಎಂದು ಹೇಳಿದ್ದಾರೆ.

ಆರೋಪಗಳನ್ನು ತಳ್ಳಿಹಾಕಿದ ಬಿಜೆಪಿ, “ಇದು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಆರೋಪ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ವಿನೋದ್ ತಾವ್ಡೆ ವಾರ್ಡ್ ಮಟ್ಟದಲ್ಲಿ ಹಣ ಹಂಚುತ್ತಾರೆಯೇ? ಇಂತಹ ಆರೋಪಗಳು ಅಸಂಬದ್ಧವಾಗಿವೆ” ಎಂದು ಹೇಳಿದೆ.

ಬಿಜೆಪಿ ನಾಯಕ ಅತುಲ್ ಭಟ್ಕಳ್ಕರ್, “ಸನ್ನಿಹಿತ ಸೋಲನ್ನು ಎದುರಿಸುತ್ತಿರುವ ವಿರೋಧ ಪಕ್ಷಗಳು ಸೃಷ್ಟಿಸಿದ ಸುಳ್ಳು ಆರೋಪಗಳು ಇವು. ಇಂತಹ ಆರೋಪಗಳು ಬಿಜೆಪಿಯ ಪ್ರತಿಷ್ಠೆಯನ್ನು ಕೆಡಿಸುವ ಉದ್ದೇಶಪೂರ್ವಕ ಪ್ರಯತ್ನದ ಭಾಗವಾಗಿವೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X