ಮಹಿಳೆ ಜೊತೆ ಲೈಂಗಿಕ ಚೇಷ್ಟೆ ಆರೋಪ; ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

Date:

Advertisements

ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿರುವ ಆರೋಪ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ವಿರುದ್ಧ ಕೇಳಿಬಂದಿದ್ದು, ಕೂಡಲೇ ಅವನ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವನನ್ನು ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪುಟ್ಟರಾಜು ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ದೇವರಾಜೇಗೌಡ ವಿರುದ್ಧ ಹೈಗೌಂಡ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ, “ರಾಜ್ಯದ ಜನತೆಗೆ ದೇವರಾಜೇಗೌಡನ ನೈಜ ಚಿತ್ರಣವನ್ನು ಹಾಗೂ ಹಿನ್ನೆಲೆಯನ್ನು ಬಹಿರಂಗಪಡಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಹಾಸನ ಲೈಂಗಿಕ ಪ್ರಕರಣದಲ್ಲಿ ದೇವರಾಜೇಗೌಡ ದೊಡ್ಡ ಬ್ಲ್ಯಾಕ್‌ ಮೇಲರ್. ಮಹಿಳೆಯನ್ನು ಕಾಮಾಂಧನಾ ರೀತಿಯಲ್ಲಿ ಪ್ರಚೋದಿಸಿ ಒತ್ತಾಯಪೂರ್ವಕವಾಗಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisements

“ದೇವರಾಜೇಗೌಡ ಪೆನ್ ಡ್ರೈವ್ ಬ್ಲಾಕ್ ಮೇಲರ್ ಎಂದು ಈಗಾಗಲೇ ಕುಖ್ಯಾತಿ ಗಳಿಸಿದ್ದಾನೆ. ಇವನ ವಿರುದ್ಧ ಸಂತ್ರಸ್ತೆಯೊಬ್ಬರು 01/04/2024 ರಂದು ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ದೂರು ನೀಡಿರುವುದು ಬಹಿರಂಗವಾಗಿದೆ. ಆ ಹಿನ್ನೆಲೆಯಲ್ಲಿ ಅನವಶ್ಯಕವಾಗಿ ಪೆನ್ ಡ್ರೈವ್ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದ ಆರೋಪಿ ಇಂದು ಅವನ ಹೀನಾಯ ತನ ಬಹಿರಂಗವಾಗಿದೆ” ಎಂದು ಉಲ್ಲೇಖಿಸಿಲಾಗಿದೆ.

ದೇವರಾಜೇಗೌಡ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X