ಮಹಿಳೆಯರ ಉಡುಗೆ ಬಗ್ಗೆ ಬಿಜೆಪಿ ಮುಖಂಡನ ಅವಹೇಳನ; ಬಿಜೆಪಿಯ ಮಹಿಳಾ ವಿರೋಧಿ ಸಿದ್ಧಾಂತದ ಪ್ರತಿಬಿಂಬ

Date:

Advertisements

ಮಹಿಳೆಯರ ಉಡುಗೆಗಳ ಬಗ್ಗೆ ಬಿಜೆಪಿಯ ಮಾಜಿ ಶಾಸಕರೊಬ್ಬರು ನಿಂದನಾತ್ಮಕ ಹೇಳಿಕೆ ನೀಡಿದ್ದು, ಅವರ ಹೇಳಿಕೆಯನ್ನು ಕಾಂಗ್ರೆಸ್‌ ಖಂಡಿಸಿದೆ. ಬಿಜೆಪಿಗರ ಇಂತಹ ಹೇಳಿಕೆಗಳು ಮಹಿಳೆಯರ ಕುರಿತು ಬಿಜೆಪಿ ನಾಯಕರಲ್ಲಿರುವ ವಿಕೃತ ಮನಸ್ಥಿತಿ ಮತ್ತು ಮಹಿಳಾ ವಿರೋಧಿ ಸಿದ್ದಾಂತವನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಉತ್ತರಾಖಂಡದ ಬಿಜೆಪಿ ಮಾಜಿ ಶಾಸಕ ಹರ್ಭಜನ್ ಸಿಂಗ್ ಚೀಮಾ ಅವರು “ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಮಹಿಳೆಯರ ಉಡುಗೆ ತೊಡುಗೆಯೇ ಕಾರಣ. ಮಹಿಳೆಯರು ಭಾರತೀಯ ಸಂಸ್ಕೃತಿಯಂತೆ ಬಟ್ಟೆ ತೊಡಬೇಕು” ಎಂದು ಹೇಳಿದ್ದರು.

ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಉತ್ತರಾಖಂಡದ ಕಾಂಗ್ರೆಸ್ ವಕ್ತಾರ ಗರಿಮಾ ಮೆಹ್ರಾ ದಸೌನಿ, “ಚೀಮಾ ಅವರ ಹೇಳಿಕೆಯು ಬಿಜೆಪಿಯ ಸಂಸ್ಕೃತಿ, ಸ್ವಭಾವ ಮತ್ತು ಮುಖವಾಡವನ್ನು ಬಹಿರಂಗಪಡಿಸಿದೆ. ಮಹಿಳೆಯರ ಪ್ರಗತಿ ಮತ್ತು ಅಭಿವೃದ್ಧಿಗೆ ವಿರುದ್ಧವಾದ ಮನಸ್ಥಿತಿಯನ್ನು ಬಿಜೆಪಿ ಪ್ರಚಾರ ಮಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

Advertisements

“ರಾಜ್ಯದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಹೆಚ್ಚಿನವು ಅಪ್ರಾಪ್ತರ ಮೇಲೆ ನಡೆಯುತ್ತಿವೆ. ಅಪ್ರಾಪ್ತರ ಮೇಲಾಗುವ ಕೃತ್ಯಗಳನ್ನು ತಡೆಯಲು ಅವರು ಏನನ್ನು ಧರಿಸಬೇಕು? ಚೀಮಾ ಅವರ ಹೇಳಿಕೆಯನ್ನು ‘ಕ್ಷಮಿಸಲಾಗದು’. ಅವರು ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಮಹಿಳೆಯರನ್ನು ದೂಷಿಸುವ ಮನಸ್ಥಿತಿಯನ್ನು ಬಿಜೆಪಿ ಉತ್ತೇಜಿಸುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X