ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್ಗೆ ಸೇರುವ ಸಾಧ್ಯತೆ ಇದೆ.
ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಯನ್ನು ಹೊರಟ್ಟಿ ಅಂಗೀಕರಿಸಿದ್ದಾರೆ. ಜೂನ್ನಲ್ಲಿ ಪರಿಷತ್ ಸದಸ್ಯ ಸ್ಥಾನದ ಅವಧಿ ಮುಗಿಯಲಿದ್ದು, ಮೂರು ತಿಂಗಳು ಮುಂಚೆಯೇ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು – ಕೊಡಗು ಟಿಕೆಟ್ ಕೈತಪ್ಪಿದ ಬೆನ್ನಲ್ಲಿಯೇ ಮುನಿಸಿಕೊಂಡು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದ ತೇಜಸ್ವಿನಿ ಅವರು ಆ ಬಳಿಕ ರಾಜಕೀಯ ಪ್ರವೇಶ ಮಾಡಿ ಜನಪ್ರತಿನಿಧಿಯಾಗಿದ್ದರು. ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಸೋಲುಣಿಸಿದ್ದ ತೇಜಸ್ವಿನಿ ಗೌಡ ಮತ್ತೆ ಕಾಂಗ್ರೆಸ್ಗೆ ಸೇರಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.