ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ

Date:

ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ.

ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು,  ರಾಜೀನಾಮೆಯನ್ನು ಹೊರಟ್ಟಿ ಅಂಗೀಕರಿಸಿದ್ದಾರೆ. ಜೂನ್‌ನಲ್ಲಿ ಪರಿಷತ್‌ ಸದಸ್ಯ ಸ್ಥಾನದ ಅವಧಿ ಮುಗಿಯಲಿದ್ದು, ಮೂರು ತಿಂಗಳು ಮುಂಚೆಯೇ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು – ಕೊಡಗು ಟಿಕೆಟ್‌ ಕೈತಪ್ಪಿದ ಬೆನ್ನಲ್ಲಿಯೇ ಮುನಿಸಿಕೊಂಡು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದ ತೇಜಸ್ವಿನಿ ಅವರು ಆ ಬಳಿಕ ರಾಜಕೀಯ ಪ್ರವೇಶ ಮಾಡಿ ಜನಪ್ರತಿನಿಧಿಯಾಗಿದ್ದರು. ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರಿಗೆ ಸೋಲುಣಿಸಿದ್ದ ತೇಜಸ್ವಿನಿ ಗೌಡ ಮತ್ತೆ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...