ಗುಜರಾತ್‌| ಕ್ಷತ್ರಿಯ ಸಮುದಾಯದ ಪ್ರತಿಭಟನೆ; ಬಿಜೆಪಿಯಲ್ಲಿ ಮುಂದುವರಿದ ತಿಕ್ಕಾಟ

Date:

Advertisements

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್‌ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ,  ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ.

ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅವರು ಕ್ಷತ್ರಿಯ ಸಮುದಾಯದ ಕುರಿತು ರಾಜಕೋಟ್‌ನ ಬಿಜೆಪಿ ಅಭ್ಯರ್ಥಿ ಪರ್ಷೋತ್ತಮ್ ರೂಪಾಲಾ ಅವರ ಹೇಳಿಕೆಯಿಂದ ಆಕ್ರೋಶಗೊಂಡಿರುವ ಸಮುದಾಯವನ್ನು ಪತ್ರಿಕಾಗೋಷ್ಠಿ ನಡೆಸಿ ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದಾರೆ.

ಇನ್ನೊಂದೆಡೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಂಸದ ರಾಜೇಂದ್ರ ಸಿಂಗ್ ರಾಣಾ ಮಾತ್ರ “ರೂಪಾಲಾ ಅವರ ಹೇಳಿಕೆ ಕ್ಷತ್ರಿಯರ ಭಾವನೆಗೆ ನೋವುಂಟು ಮಾಡಿದೆ, ಆದ್ದರಿಂದ ಪ್ರತಿಭಟನೆ ಮುಂದುವರಿಯುತ್ತದೆ. ಈ ಹೋರಾಟದ ಪರಿಣಾಮವನ್ನು ಎಲ್ಲರೂ ಒಪ್ಪಿಕೊಳ್ಳಲಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯನ್ನು ಬಿಜೆಪಿ ನಾಯಕರೇ ಸೋಲಿಸುವ ಸುಳಿವು ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ?   ಗುಜರಾತ್ ಬಿಜೆಪಿಯಲ್ಲಿ ಭಾರೀ ಕಲಹ; ಘರ್ಷಣೆಯಿಂದ ಆಸ್ಪತ್ರೆ ಸೇರಿದ ಕಾರ್ಯಕರ್ತರು

ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅವರು ಪರ್ಷೋತ್ತಮ್ ರೂಪಾಲಾ ಅವರನ್ನು ಕ್ಷಮಿಸಬೇಕೆಂದು ರಜಪೂತ ಸಮುದಾಯದವರನ್ನು ಒತ್ತಾಯಿಸಿದ್ದಾರೆ. “ರೂಪಾಲಾ ತನ್ನ ಹೇಳಿಕೆಗೆ ಮೂರು ಬಾರಿ ಕ್ಷಮೆಯಾಚಿಸಿದರೂ ರಜಪೂತರು ಸಿಟ್ಟಿಗೆದ್ದಿದ್ದಾರೆ. ಹೀಗಾಗಿ ಸಿಎಂ ಹಾಗೂ ಪಕ್ಷದ ರಜಪೂತ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಸಮುದಾಯವು ಔದಾರ್ಯ ತೋರಿ ಅವರನ್ನು ಕ್ಷಮಿಸಬೇಕು” ಎಂದು ಸಿ ಆರ್ ಪಾಟೀಲ್ ಮನವಿ ಮಾಡಿದ್ದಾರೆ.

ಇದಲ್ಲದೆ, ರಜಪೂತ ಅಥವಾ ಕ್ಷತ್ರಿಯ ಸಮುದಾಯದ ಸದಸ್ಯರನ್ನು ಸಮಾಧಾನಪಡಿಸಲೆಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮ್ಮುಖದಲ್ಲಿ ಪಾಟೀಲ್ ಅವರು ಪಕ್ಷದ ರಜಪೂತ ನಾಯಕರೊಂದಿಗೆ ಸಭೆ ನಡೆಸಿದರು.

ಇದನ್ನು ಓದಿದ್ದೀರಾ?   ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ, ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದ ಕೇಂದ್ರ!

ಇದಲ್ಲದೆ, ರಜಪೂತ ಅಥವಾ ಕ್ಷತ್ರಿಯ ಸಮುದಾಯದ ಸದಸ್ಯರನ್ನು ಸಮಾಧಾನಪಡಿಸುವ ಉದ್ದೇಶದಿಂದ ನಿರ್ಣಯವನ್ನು ಪಡೆಯಲು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮ್ಮುಖದಲ್ಲಿ ಪಾಟೀಲ್ ಅವರು ಪಕ್ಷದ ರಜಪೂತ ನಾಯಕರೊಂದಿಗೆ ಸಭೆ ನಡೆಸಿದರು.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜಕೋಟ್‌ನ ಅಭ್ಯರ್ಥಿ ಪರ್ಷೋತ್ತಮ್‌ ರೂಪಾಲಾ, “ಹಲವಾರು ರಜಪೂತ ಆಡಳಿತಗಾರರು ಬ್ರಿಟಿಷರಿಗೆ ಸಹಕಾರ ನೀಡಿದ್ದರು” ಎಂದು ಆರೋಪಿಸಿದ್ದರು. ಅವರ ಹೇಳಿಕೆಯ ನಂತರ, ಕರ್ಣಿ ಸೇನಾದ ಮುಖ್ಯಸ್ಥ ರಾಜ್ ಶೆಖಾವತ್ ಶನಿವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X