ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

Date:

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ ಹೇಳಿದ್ದಾರೆ. ಈ ಹೇಳಿಕೆಯು ಬಿಜೆಪಿ ಮತ್ತು ಆರ್‌ಜೆಡಿ ನಡುವೆ ನಡೆಯುತ್ತಿರುವ ವಾಕ್ಸಮರವನ್ನು ಇನ್ನಷ್ಟು ತೀವ್ರಗೊಳಿಸಿದೆ.

ಶುಕ್ರವಾರ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಎರಡು ಚುನಾವಣಾ ಪ್ರಚಾರ ರ್‍ಯಾಲಿಗಳನ್ನು ತರಾಟೆಗೆ ತೆಗೆದುಕೊಂಡು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತೇಜಸ್ವಿ, “ರೈತರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಉದ್ಯಮಿಗಳು ಮತ್ತು ಇತರೆ ಉದ್ಯೋಗಿಗಳಿಗೆ ಉದ್ಯೋಗ ಪಡೆಯುವುದು ಈಗ ಕಷ್ಟವಿದೆ ಎಂದು ತಿಳಿದುಬಂದಿದೆ. ಮೋದಿ ಅಧಿಕಾರದಲ್ಲಿದ್ದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುವುದಿಲ್ಲ ಎಂದೂ ತಿಳಿದಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

ಮೋದಿ ಮತ್ತೆ ಪ್ರಧಾನಿಯಾದವರೆ ಅವರು ವಿವಿಧ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ. ಶಾಲೆಗಳು ಮತ್ತು ಆಸ್ಪತ್ರೆಗಳ ಸೇವೆ ಜನರಿಗೆ ಲಭ್ಯವಾಗುತ್ತಿದೆಯೇ ಎಂಬ ವಿಷಯಗಳ ಬಗ್ಗೆ ಚರ್ಚಿಸಲು ಸಹ ಕಷ್ಟವಾಗುತ್ತದೆ. ಮೋದಿ ಅಧಿಕಾರದಲ್ಲಿ ಉಳಿಯುವವರೆಗೆ ರೈತರ ಆದಾಯವು ದ್ವಿಗುಣಗೊಳ್ಳುವುದಿಲ್ಲ” ಎಂದು ಹೇಳಿದರು.

ಪ್ರಧಾನಿ ಮೋದಿ ಅಧಿಕಾರವಧಿಯಲ್ಲಿ ಬಿಹಾರ ಬಿಜೆಪಿ ಸಂಸದರು ಯಾವುದೇ ಸಾಧನೆಯನ್ನು ಮಾಡಿಲ್ಲ ಎಂದು ದೂರಿದ ಬಿಹಾದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ, “ಕಳೆದ 10 ವರ್ಷಗಳಲ್ಲಿ ಬಿಹಾರದ 39 ಎನ್‌ಡಿಎ ಲೋಕಸಭಾ ಸದಸ್ಯರು ಮಾಡಿದ ಕೆಲಸಗಳ ಬಗ್ಗೆ ಮತ್ತು ತಮ್ಮ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆ ಪ್ರಧಾನಿ ಮೋದಿ ಚರ್ಚಿಸಲ್ಲ. ಏನಾದರೂ ಚರ್ಚಿಸಲು ಹೇಗೆ ಸಾಧ್ಯ?. ಅವರು ಸಾಧನೆಯೇ ಮಾಡಿಲ್ಲ” ಎಂದರು.
“ಮೋದಿ ಅವರು ಜನರನ್ನು ತುಂಬಾ ದಾರಿ ತಪ್ಪಿಸಿದ್ದಾರೆ. ಈಗ ಮೋದಿ ಅವರು ಅನೇಕ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹಾಗಿರುವಾ ಪ್ರಧಾನಿ ಬಗ್ಗೆ ಮಾತನಾಡಲು ಏನೂ ಉಳಿದಿಲ್ಲ. ಒಟ್ಟಿನಲ್ಲಿ ಪ್ರಧಾನಿ ಸಮಸ್ಯೆಗಳಿಂದ ದೂರ ಓಡುತ್ತಿರುವುದು ಖಚಿತ” ಎಂದು ಪ್ರಧಾನಿಯನ್ನು ತೇಜಸ್ವಿ ಯಾದವ್ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Air India A1-171 ವಿಮಾನ ಪತನದಲ್ಲಿ 117 ಮಂದಿ ಮೃತ : ದುರಂತಕ್ಕೆ ಟಾಟಾ ಗ್ರೂಪ್‌ ಸಂತಾಪ

ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ A1- 171 ವಿಮಾನ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ...

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ...

Download Eedina App Android / iOS

X