ಕೇಂದ್ರ ಕಾನೂನು ಸಚಿವ ‘ಭ್ರಷ್ಟಾಚಾರಿ ನಂ. 1’ ಎಂದ ಬಿಜೆಪಿ ಶಾಸಕ

Date:

Advertisements

ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘ್ವಲ್‌ ಅವರು ‘ಭ್ರಷ್ಟಾಚಾರಿ ನಂಬರ್‌ ಒನ್’ ಎಂದು ಬಿಜೆಪಿ ಶಾಸಕ ಹಾಗೂ ರಾಜಸ್ಥಾನ ವಿಧಾನಸಭೆಯ ಮಾಜಿ ಸ್ಪೀಕರ್‌ ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಭಿಲ್ವಾರಾದ ಶಾಹಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ 89 ವರ್ಷದ ಕೈಲಾಶ್‌ ಚಂದ್ರ, ಭ್ರಷ್ಟಾಚಾರಿಯಾಗಿರುವ ಅರ್ಜುನ್‌ ರಾಮ್‌ ಮೇಘ್ವಲ್‌ ಅವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಕೋರಿ ತಾವು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

“ಅರ್ಜುನ್‌ ಮೇಘ್ವಲ್‌ ಭ್ರಷ್ಟಾಚಾರಿ ನಂಬರ್‌ 1. ಅವರ ವಿರುದ್ಧ ಹಲವು ಭ್ರಷ್ಟಾಚಾರ ಪ್ರಕರಣಗಳಿವೆ. ನೀವು ಕಾನೂನು ಸಚಿವರಾಗಿ ನೇಮಿಸಿದವರು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂದು ಪ್ರಧಾನಿಗೆ ಬರೆಯುವ ಪತ್ರದಲ್ಲಿ ವಿವರಿಸುತ್ತೇನೆ. ಅವರು ಅಧಿಕಾರಿಯಾಗಿದ್ದಾಗ ಬಡವರನ್ನು ಮತ್ತು ಪರಿಶಿಷ್ಟ ಜಾತಿಯವರನ್ನೂ ಬಿಟ್ಟಿಲ್ಲ. ಎಲ್ಲರಿಂದಲೂ ಹಣ ಪಡೆದಿದ್ದರು,” ಎಂದು ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

Advertisements

“ಅರ್ಜುನ್‌ ಮೇಘ್ವಲ್‌ ಹಿಂದೆ ಕಲೆಕ್ಟರ್‌ ಆಗಿದ್ದಾಗ ವ್ಯಾಪಕ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದರು. ಭ್ರಷ್ಟಾಚಾರ ಪ್ರಕರಣಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಅವರು ರಾಜಕೀಯ ಸೇರಿದರು ಎಂದು ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲು ಧೈರ್ಯವಿದೆಯೆ? ಕೇಂದ್ರಕ್ಕೆ ಸಂಜಯ್‌ ರಾವುತ್‌ ಸವಾಲ್‌

“ಇಲ್ಲಿನ ರಾಜಕೀಯದಲ್ಲಿ ಸಚಿವರು ಹಸ್ತಕ್ಷೇಪ ನಡೆಸುತ್ತಿದ್ದಾರೆ. ಅವರ ವಿರುದ್ಧದ ಎಲ್ಲ ಭ್ರಷ್ಟಾಚಾರ ಪ್ರಕರಣಗಳು ಇತ್ಯರ್ಥವಾಗುವ ತನಕ ಸಚಿವ ಸ್ಥಾನದಿಂದ ತೆಗೆದುಹಾಕಬೇಕು” ಎಂದು ಕೈಲಾಶ್‌ ಚಂದ್ರ ಹೇಳಿದ್ದಾರೆ.

ಅರ್ಜುನ್‌ ಮೇಘ್ವಲ್ ಅವರು ಕೇಂದ್ರ ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಂಸ್ಕೃತಿ ಸಚಿವರಾಗಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯ 25 ಸದಸ್ಯರ ಸಂಕಲ್ಪ ಪತ್ರ ಅಥವಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಇತ್ತೀಚೆಗಷ್ಟೇ ಅರ್ಜುನ್‌ ಮೇಘ್ವಲ್‌ ಅವರನ್ನು ನೇಮಿಸಲಾಗಿತ್ತು. ರಾಜಸ್ಥಾನ ಆಡಳಿತಾತ್ಮಕ ಸೇವೆಗಳ ಅಧಿಕಾರಿಯಾಗಿದ್ದ ಅವರು ನಂತರ ಐಎಎಸ್‌ ಅಧಿಕಾರಿಯಾಗಿ ಭಡ್ತಿಗೊಂಡು ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

2009 ಲೋಕಸಭಾ ಚುನಾವಣೆಗೆ ಮುನ್ನ ವಿಆರ್‌ಎಸ್‌ ಪಡೆದು ಅವರು ಬಿಕಾನೇರ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆದು ಗೆಲುವು ಸಾಧಿಸಿದ್ದರು.

ಅರ್ಜುನ್ ಮೇಘ್ವಲ್ ಅವರನ್ನು ‘ಭ್ರಷ್ಟ’ನಾಯಕ ಎಂದು ಸಾರ್ವಜನಿಕವಾಗಿ ಕರೆದಿದ್ದಕ್ಕಾಗಿ ಕೈಲಾಶ್ ಮೇಘವಾಲ್ ಅವರಿಗೆ ರಾಜಸ್ಥಾನ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿಗೊಳಿಸಿದೆ.

ರಾಜ್ಯಾಧ್ಯಕ್ಷ ಸಿ ಪಿ ಜೋಶಿ ಅವರ ಸೂಚನೆ ಮೇರೆಗೆ ರಾಜ್ಯ ಶಿಸ್ತು ಸಮಿತಿಯು ಕೈಲಾಶ್ ಮೇಘವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಹತ್ತು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X