ಯು ಟಿ ಖಾದರ್ ಸಾಮ್ರಾಜ್ಯದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ: ಬಿಜೆಪಿ ಮುಖಂಡ ಸಿ ಟಿ ರವಿ

Date:

Advertisements

ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರದ ದಿನದಂದು ಮಂಗಳೂರಿನ ಬೋಳಿಯಾರಿನಲ್ಲಿ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಸಿ ಟಿ ರವಿ, “ಯು ಟಿ ಖಾದರ್ ಸಾಮ್ರಾಜ್ಯದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ. ಹಾಗಾಗಿ, ಪಾಕಿಸ್ತಾನದ ಕುನ್ನಿಗಳೇ ದೇಶ ಬಿಟ್ಟು ತೊಲಗಿ ಅಂತ ನಾನು ಸಾವಿರ ಬಾರಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಾಕಿಸ್ತಾನದ ಕುನ್ನಿಗಳೆ ಎಂದು ಫೋಷಣೆ ಕೂಗಿದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದ ಹಾಗಾಯಿತು” ಎಂದು ಹೇಳಿದರು.

“ಮಂಗಳೂರು ಕಮಿಷನರ್ ಹೇಳಿಕೆ ಸಮರ್ಥನೀಯವಲ್ಲ. ಅದನ್ನು ವಾಪಸ್ ಪಡೆಯಬೇಕು. ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆಂಬ ಕುರಿತು ಮಸೀದಿ ವತಿಯಿಂದ ದೂರು ನೀಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮಂಗಳೂರು ಪೊಲೀಸ್ ಕಮಿಷನರ್ ಅವರು ಪಾಕಿಸ್ತಾನದ ಕುನ್ನಿಗಳನ್ನು ಗುರುತಿಸಿ, ಅವರ ಮೇಲೆ ಪ್ರಕರಣ ಹಾಕಿ ಅವರನ್ನ ಗಡೀಪಾರು ಮಾಡಬೇಕು. ಅಥವಾ ಖಾದರ್ ಅವರೇ ಗುರುತಿಸಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು” ಎಂದು ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ ಕಿಡಿಕಾರಿದ್ದಾರೆ.

Advertisements

“ಭಾರತ್ ಮಾತಾಕೀ ಜೈ ಎಂದಾಗ ಹಾಗೂ ಪಾಕಿಸ್ತಾನಕ್ಕೆ ಬೈದಾಗ ನಮಕ್ ಹರಾಮ್ ಗಳು ಮಾತ್ರ ಪ್ರಚೋದನೆಗೆ ಒಳಗಾಗುತ್ತಾರೆ. ಆದರೆ, ‘ಪಾಕಿಸ್ತಾನದ ಕುನ್ನಿಗಳೇ ಎಂದಿದ್ದಕ್ಕೆ ಮಸೀದಿಯ ಎರಡೂ ಬದಿ ನಿಂತಿದ್ದವರು ಪ್ರಚೋದನೆಗೊಳಗಾಗಿ ಚೂರಿಯಿಂದ ಇರಿದಿದ್ದಾರೆ” ಎಂದು ಮಂಗಳೂರಿನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ. ಅವರು ಏಕೆ ಪಾಕಿಸ್ತಾನದ ಕಮಿಷನರ್ ಥರ ವರ್ತಿಸುತ್ತಾರೋ ತಿಳಿಯದು. ಅವರು ಪಾಕಿಸ್ತಾನದ ಅಧಿಕಾರಿಯಲ್ಲ, ಭಾರತದ ಪೊಲೀಸ್ ಅಧಿಕಾರಿ. ಅವರ ಹೇಳಿಕೆ ಸಮರ್ಥನೀಯವಲ್ಲ. ಅದನ್ನು ವಾಪಸ್ ಪಡೆಯಬೇಕು. ಮಸೀದಿಯವರು ಕೊಟ್ಟ ದೂರಿಗೆ ತಕ್ಷಣ ಬಿ ವರದಿ ಸಲ್ಲಿಸಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ | ‘ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು’ ಎಂದ ವಿಪಕ್ಷ ನಾಯಕ ಅಶೋಕ್!

“ಇರಿತಕ್ಕೆ ಒಳಗಾದ ಹರೀಶ್, ನಂದ ಕುಮಾರ್ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ರಾಜಧರ್ಮದ ಬಗ್ಗೆ ಮಾತನಾಡುವ ವಿಧಾನ ಸಭಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ತೆರಳಿದ್ದಾಗ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿಲ್ಲ. ಗಾಯಾಳುಗಳು ಪಾಕಿಸ್ತಾನದ ಕುನ್ನಿಗಳಾಗಿದ್ದರೆ ಅವರು ಆಸ್ಪತ್ರೆಯಲ್ಲೇ ಇರುತ್ತಿದ್ದರು. ಆದರೆ ಗಾಯಾಳುಗಳು ಭಾರತ ಮಾತೆಯ ಸುಪುತ್ರರಾದ ಕಾರಣ ಅವರು ಆಸ್ಪತ್ರೆಗೆ ಬಂದರೂ ಅವರನ್ನು ಭೇಟಿಯಾಗಿಲ್ಲ” ಎಂದು ಸಿ ಟಿ ರವಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮುಖಂಡರಾದ ಪ್ರತಾಪ್ ಸಿಂಹ ನಾಯಕ್, ಸತೀಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಬಿಜೆಪಿ ಸೋತಿದ್ದು ಇಂಥಾ ಮಹಾನುಭಾವರ ಮಹಾನ್ ನುಡಿಗಳಿಂದ,, ಅಲ್ಲದೆ ಈತನನ್ನು ಪಕ್ಷ ಸೈಡ್ ಲೈನ್ ಮಾಡಿದ್ದೂ ಸಹ ಇಂಥಹ ವರ್ತನೆಗಳಿಂದ ,,ಇಂಥವರಿಂದಲೇ ಪಕ್ಷ ಒಂದು ಗತಿ ಕಾಣುವುದರಲ್ಲಿ ಸಂಶಯವಿಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X