ಕರ್ತವ್ಯ ನಿರತ ಪೊಲೀಸರೊಂದಿಗೆ ಬಿಜೆಪಿ ಶಾಸಕ-ಪುತ್ರನ ಅನುಚಿತ ವರ್ತನೆ; ಸಂಚಾರಿ ಪೊಲೀಸರಿಂದ ತರಾಟೆ

Date:

Advertisements

ತಾನು ಶಾಸಕನ ಮಗ ಎಂದು ಹೇಳಿಕೊಂಡು ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ ಸ್ಥಳೀಯ ಎಂಎಲ್‌ಸಿಯ ಮಗನ ಯಾವುದೇ ರಾಜಕೀಯ ಹಿನ್ನೆಲೆಗೂ ಮಣಿಯದೆ ತನ್ನ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್‌ ಕಾನ್‌ಸ್ಟೆಬಲ್‌ನ ವೃತ್ತಿ ಧರ್ಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಬಿಜೆಪಿ ಶಾಸಕ ಚೌಧರಿ ರಿಷಿಪಾಲ್‌ ಸಿಂಗ್‌ನ ಪುತ್ರ ತಪೇಶ್‌ ‘ಬಿಜೆಪಿ ಶಾಸಕ’ ಎಂಬ ಸ್ಟಿಕರ್ ಮತ್ತು ಬ್ಯಾನೆಟ್‌ ಮೇಲೆ ಪಕ್ಷದ ಧ್ವಜವಿದ್ದ ಸ್ಕಾರ್ಪಿಯೋವನ್ನು ಜನನಿಬಿಡ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಈ ವೇಳೆ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್‌ ಪೊಲೀಸ್‌ ಚಾಲಕನಿಗೆ ಕಾರನ್ನು ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದರು.

ಇದನ್ನು ಓದಿದ್ದೀರಾ? ದ್ವೇಷ ಭಾಷಣ, ಅಪರಾಧ ಪುನರಾವರ್ತಿಸಬಾರದು: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

Advertisements

ಆಗ ಎಂಎಲ್‌ಸಿ ಮಗ ತಪೇಶ್‌ ಕರ್ತವ್ಯ ನಿರತ ಪೊಲೀಸರಿಗೆ “ಮೊದಲು ಇಲ್ಲಿಂದ ತೊಲಗು” ಎಂದು ತನ್ನ ಅಧಿಕಾರ ದರ್ಪವನ್ನು ತೋರಿಸಲು ಮುಂದಾಗಿದ್ದರು. ಆದರೆ ಇದ್ಯಾವುದಕ್ಕೂ ಹೆದರದ ಪೊಲೀಸ್‌ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ರಾಫಿಕ್‌ ಪೊಲೀಸ್‌ ಮತ್ತು ಬಿಜೆಪಿ ಶಾಸಕನ ಮಗನ ನಡುವಿನ ವಾಗ್ದಾಳಿಯ ವಿಡಿಯೋ ಈಗ ವೈರಲ್‌ ಆಗಿದೆ.

“ನೀವು ಇಲಾಖೆಯ ಖ್ಯಾತಿಗೆ ದಕ್ಕೆ ತರುತ್ತಿದ್ದೀರಿ” ಎಂದು ತಪೇಶ್‌ ಎಸ್‌ಪಿ ಸಿಂಗ್‌ಗೆ ಎದುರುತ್ತರ ನೀಡಿದ್ದಾನೆ. ಆಗ “ನೀವು ಸರಿಯಾಗಿ ಮಾತನಾಡಿದ್ದರೆ, ಪೊಲೀಸರೊಂದಿಗೆ ಸರಿಯಾಗಿ ವರ್ತಿಸಿದ್ದರೆ ಇಂತಹ ಪರಿಸ್ಥಿತಿ ಸೃಷ್ಟಿಯಾಗುತ್ತಿರಲಿಲ್ಲ. ನಿಮ್ಮ ವರ್ತನೆಯಿಂದ ನಿಮ್ಮ ತಂದೆಯ ಖ್ಯಾತಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದೀರಿ” ಎಂದು ಎಸ್‌ಪಿ ಸಿಂಗ್ ಕ್ಲಾಸ್‌ ತೆಗೆದುಕೊಂಡಿದ್ದಾರೆ.

“ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ನಿಮಗಿಂತ ನಾನು ಹೆಚ್ಚು ವಿದ್ಯಾವಂತ. ಹೇಗೆ ಮಾತನಾಡಬೇಕು ಎನ್ನುವುದು ನನಗೆ ಗೊತ್ತು. ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುತ್ತೇನೆ” ಎಂದು ಸಂಚಾರಿ ಪೊಲೀಸ್‌ ಧೈರ್ಯವಾಗಿ ಸಮಾಧಾನದಿಂದಲೇ ಉತ್ತರಿಸಿದ್ದಾರೆ.

ಹತ್ರಾಸ್‌ನ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅಶೋಕ್‌ ಕುಮಾರ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಘಟನೆಯ ಬಗ್ಗೆ ಮಾಹಿತಿ ದೃಢಪಟ್ಟಿದ್ದು, ತನಿಖೆ ನಡೆಯುತ್ತಿದೆ ಮತ್ತು ವಿಚಾರಣೆಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X