ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ: ಮಹುವಾ ಮೊಯಿತ್ರಾ

Date:

Advertisements

ಕಳೆದ ಲೋಕಸಭೆ ಅಧಿವೇಶನದಲ್ಲಿ ತನ್ನನ್ನು ಉಚ್ಚಾಟಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ “ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ” ಎಂದು ಕುಟುಕಿದರು.

ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಅವರು, “ಸರ್ಕಾರದ ಭಾಷಣ ಬರಹಗಾರರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಜುಗರಕ್ಕೀಡುಮಾಡಿದ್ದಾರೆ. ಆಡಳಿತ ಪಕ್ಷಕ್ಕೆ ಲೋಕಸಭೆಯಲ್ಲಿ ಬಹುಮತ ಇಲ್ಲದಿದ್ದರೂ ಕೂಡಾ ಭಾಷಣದಲ್ಲಿ ಸ್ಪಷ್ಟವಾದ ಸ್ಥಿರ ಸರ್ಕಾರಕ್ಕಾಗಿ ಬಹುಮತದ ಜನಾದೇಶವಾಗಿದೆ ಎಂದು ಬರೆಯಲಾಗಿದೆ” ಎಂದು ರಾಷ್ಟ್ರಪತಿ ಭಾಷಣವನ್ನು ಟೀಕಿಸಿದರು.

ಇದನ್ನು ಓದಿದ್ದೀರಾ?  ಸಂಸತ್‌ನಿಂದ ಉಚ್ಛಾಟನೆ | ನನ್ನ ಗೆಲುವು ಉತ್ತರ ನೀಡುತ್ತದೆ: ಮಹುವಾ ಮೊಯಿತ್ರಾ

Advertisements

“ಇದು ಸ್ಥಿರ ಸರಕಾರವಲ್ಲ. ಇದು ಯು-ಟರ್ನ್‌ಗಳ ಇತಿಹಾಸ ಹೊಂದಿರುವ ಬಹು ಮಿತ್ರರಾಷ್ಟ್ರಗಳ ಮೇಲೆ ಅವಲಂಬಿತವಾಗಿದೆ. 272 ಸ್ಥಾನ ಪಡೆಯುವುದಕ್ಕೆ ಬಿಜೆಪಿಗೆ 32 ಸ್ಥಾನ ಕಡಿಮೆಯಾಗಿದೆ. ಈ ಬಾರಿ 234 ಯೋಧರು ದೃಢವಾಗಿ ಒಗ್ಗೂಡಿದ್ದಾರೆ. ಈ ಬಾಗಿಲುಗಳ ಮೂಲಕ ನಡೆಯಲು ನಾವು ಬೆಂಕಿಯನ್ನು ದಾಟಿ ಬಂದಿದ್ದೇವೆ. ಹಾಗಾಗಿ ಈ ಬಾರಿ ನಮ್ಮನ್ನು ಮೌನವಾಗಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ನಗದು-ಪ್ರಶ್ನೆ ಆರೋಪದ ಮೇಲೆ 17ನೇ ಲೋಕಸಭೆಯಿಂದ ತನ್ನ ಉಚ್ಚಾಟನೆಯನ್ನು ಉಲ್ಲೇಖಿಸಿ ಮಾತನಾಡಿದ ಮಹುವಾ, “ಕಳೆದ ಬಾರಿ ನಾನು ಇಲ್ಲಿ ಮಾತನಾಡಲು ಎದ್ದಾಗ, ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಓರ್ವ ಸಂಸದೆಯ ಧ್ವನಿಯನ್ನು ಹತ್ತಿಕ್ಕಿ ಆಡಳಿತ ಪಕ್ಷ (ಬಿಜೆಪಿ) ಭಾರೀ ಬೆಲೆ ತೆತ್ತಿದೆ. ನೀವು ನನ್ನನ್ನು ಕೆಳಗಿಳಿಸಲು ಪ್ರಯತ್ನದಲ್ಲಿರುವಾಗ ಜನರು ನಿಮ್ಮ 63 ಸಂಸದರನ್ನು ಶಾಶ್ವತವಾಗಿ ಕೆಳಗಿಳಿಸಿದರು” ಟ್ಯಾಂಗ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X