ಬಿಜೆಪಿಯಿಂದ ಎಎಪಿ ಅಭ್ಯರ್ಥಿಗಳ ಬೇಟೆ ಆರೋಪ; ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶ

Date:

Advertisements

ದೆಹಲಿ ವಿಧಾನಸಭಾ ಚುನವಣೆ ನಡೆದಿದ್ದು, ಫೆಬ್ರವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿಗಳನ್ನು ಬಿಜೆಪಿ ಬೇಟೆಯಾಡಲು (ಖರೀದಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಲು) ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಅವರ ಆರೋಪದ ವಿರುದ್ಧ ಬಿಜೆಪಿ ದೂರು ನೀಡಿದ್ದು, ಈ ಬೆನ್ನಲ್ಲೇ, ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಆದೇಶಿಸಿದ್ದಾರೆ.

ಎಎಪಿಯ ಆರೋಪಗಳು ಮಾನನಷ್ಟಕರ ಮತ್ತು ಚುನಾವಣಾ ಫಲಿತಾಂಶಕ್ಕೂ ಮುನ್ನ ತನ್ನ ವರ್ಚಸ್ಸಿಗೆ ಕಳಂಕ ತರುವ ಉದ್ದೇಶ ಹೊಂದಿವೆ ಎಂದು ಬಿಜೆಪಿ ವಾದಿಸಿದೆ. ಬಿಜೆಪಿ ದೂರು ಬಂದ ಬಳಿಕ, ಎಎಪಿ ಆರೋಪವು ತನಿಖೆಗೆ ಅರ್ಹವಾಗಿದೆ ಎಂದಿರುವ ಲೆಫ್ಟಿನೆಂಟ್ ಗವರ್ನರ್, ತನಿಖೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇತ್ತೀಚೆಗೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಕೇಜ್ರಿವಾಲ್, “ಎಎಪಿಯ 16 ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಆಫರ್‌ಗಳು ಬಂದಿವೆ. ಎಎಪಿ ಜೊರೆದು ಬಿಜೆಪಿಗೆ ಪಕ್ಷಾಂತರ ಮಾಡಿದರೆ ಅವರಿಗೆ ಸಚಿವ ಸ್ಥಾನಗಳು ಮತ್ತು ತಲಾ 15 ಕೋಟಿ ರೂ. ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ” ಎಂದು ಆರೋಪಿಸಿದ್ದಾರೆ.

Advertisements

“ಕೆಲವು ಏಜೆನ್ಸಿಗಳು ಆ ಪಕ್ಷವು (ಬಿಜೆಪಿ) 55ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳುತ್ತಿವೆ. ಕಳೆದ ಎರಡು ಗಂಟೆಗಳಲ್ಲಿ, ನಮ್ಮ 16 ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಕರೆಗಳು ಬಂದಿವೆ. ಅವರಿಗೆ ಎಎಪಿ ತೊರೆದು ತಮ್ಮ ಪಕ್ಷಕ್ಕೆ ಸೇರಿದರೆ, ಅವರನ್ನು ಮಂತ್ರಿಗಳನ್ನಾಗಿ ಮಾಡಿ ತಲಾ 15 ಕೋಟಿ ರೂ. ನೀಡಲಾಗುವುದು ಎಂಬ ಆಮಿಷವೊಡ್ಡಲಾಗಿದೆ” ಎಂದು ಕೇಜ್ರಿವಾಲ್ ವಿವರಿಸಿದ್ದಾರೆ.

“ಬಿಜೆಪಿ ನಿಜವಾಗಿಯೂ 55ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾದರೆ, ಅವರು ನಮ್ಮ ಅಭ್ಯರ್ಥಿಗಳನ್ನು ಏಕೆ ತಮ್ಮ ಪಕ್ಷಕ್ಕೆ ಕರೆಯುತ್ತಿದ್ದಾರೆ? ಈ ನಕಲಿ ಸಮೀಕ್ಷೆಗಳು ಎಎಪಿ ಅಭ್ಯರ್ಥಿಗಳನ್ನು ವಿಚಲಿತಗೊಳಿಸುವ ವಾತಾವರಣ ಸೃಷ್ಟಿಸುವ ಪಿತೂರಿ ಭಾಗವಾಗಿವೆ. ಆದರೆ, ನಮ್ಮ ಅಭ್ಯರ್ಥಿಗಳಲ್ಲಿ ಯಾರೂ ಪಕ್ಷಾಂತರ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಆರೋಪದ ವಿರುದ್ಧ ಲೆಫ್ಟಿನೆಂಟ್‌ ಗವರ್ನರ್‌ಗೆ ಬಿಜೆಪಿ ದೂರು ನೀಡಿದೆ. ದೂರು ಬಂದ ಬೆನ್ನಲ್ಲೇ ತನಿಖೆಗೆ ಆದೇಶಿಸಲಾಗಿದೆ.

“ಈ ವಿಷಯದ ಬಗ್ಗೆ ಸತ್ಯವನ್ನು ತಿಳಿಯಲು ಭ್ರಷ್ಟಾಚಾರ ನಿಗ್ರಹ ದಳ (ACB) ಮೂಲಕ ಸಂಪೂರ್ಣ ತನಿಖೆ ನಡೆಸಬೇಕು” ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿರುವುದಾಗಿ ಅವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ದೆಹಲಿಯ ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಬುಧವಾರ ಮತದಾನ ನಡೆದಿದೆ. ಶನಿವಾರ ಮತಗಳ ಎಣಿಕೆ ನಡೆಯಲಿದೆ. ಬುಧವಾರ ಸಂಜೆ ಹಲವಾರು ಚುನಾವಣೊತ್ತರ ಸಮೀಕ್ಷೆಗಳು ಬಂದಿದ್ದು, ಈ ಬಾರಿ ಬಿಜೆಪಿ ಅಧಿಕಾರ ಪಡೆಯುತ್ತದೆ ಎಂದು ಹೇಳುತ್ತಿವೆ. ಆದಾಗ್ಯೂ, 3ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಎಎಪಿ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X