ಕಲಾಪ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಮುಂದುವರಿದ ಬಿಜೆಪಿ ಪ್ರತಿಭಟನೆ

Date:

Advertisements
  • ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ
  • ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬಿಜೆಪಿಯ ಹತ್ತು ಶಾಸಕರನ್ನು ಸಭಾಧ್ಯಕ್ಷರು ಅಮಾನತು ಮಾಡಿದ ಕ್ರಮ ಖಂಡಿಸಿ ಬಿಜೆಪಿ ಸದಸ್ಯರು ಶುಕ್ರವಾರ ಕೂಡ ಕಲಾಪದಲ್ಲಿ ಭಾಗಿಯಾಗದೇ ರಾಜ್ಯ ಸರ್ಕಾರ ಮತ್ತು ಸ್ಪೀಕರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ.

ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಕೂಡ ಪ್ರತಿಭಟಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದರು.

ಬುಧವಾರದ ಸದನದಲ್ಲಿ ಬಿಜೆಪಿ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮುಖಕ್ಕೆ ಎಸೆದು, ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರು. ನಂತರ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಆ ಹತ್ತು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದರು.

Advertisements

ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ

ಶಾಸಕರ ಅಮಾನತು ವಿಚಾರವಾಗಿ ಕೇವಲ ವಿಧಾನಸೌಧದಲ್ಲಿ ಮಾತ್ರವಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲು ಬಿಜೆಪಿ ನಿರ್ಧಾರ ಮಾಡಿದೆ. ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ ಅಧಿವೇಶನ ಕೊನೆಯ ದಿನ

“21 ದಿನಗಳ ಕಾಲ ನಡೆದ ವಿಧಾನಮಂಡಲ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದೆ. ಅಧಿವೇಶನ ಆರಂಭದ ದಿನಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕೆಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿ ಉಂಟು ಮಾಡಿತ್ತು. ಇದೀಗ ಕೊನೆಯ ದಿನವೂ ಕಲಾಪ ಬಹಿಷ್ಕಾರ ಮಾಡಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X