ಬಿಜೆಪಿ ಬಂಡಾಯ ನಾಯಕ ಕಾಂಗ್ರೆಸ್‌ ಸೇರ್ಪಡೆ; ವಿನಯ್‌ ಕುಲಕರ್ಣಿಗೆ ಆನೆ ಬಲ

Date:

  • ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರವಾಗಿ ಸ್ಪರ್ಧಿಸಿದ್ದ ‘ತವಣಪ್ಪ’
  • ಏಪ್ರಿಲ್‌ 24ರಂದು ನಾಮಪತ್ರ ಹಿಂಪಡೆಯುವುದಾಗಿ ಘೋಷಣೆ

ಹುಬ್ಬಳ್ಳಿ – ಧಾರವಾಡದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಗಮದಿಂದ ಹತಾಶರಾಗಿದ್ದ ಬಿಜೆಪಿಗೆ ಇಂದು ಮತ್ತೊಂದು ಶಾಕ್‌ ಎದುರಾಗಿದ್ದು, ಬಿಜೆಪಿ ಪ್ರಬಲ ನಾಯಕ ಧಾರವಾಡ ಗ್ರಾಮೀಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ತವಣಪ್ಪ ಅಷ್ಟಗಿ ಭಾನುವಾರ ಕಾಂಗ್ರೆಸ್ ಸೇರಿದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಆನೆ ಬಲ ಬಂದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತವಣಪ್ಪ ಅಷ್ಟಗಿ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯವೆದ್ದು, ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದರು. ಎಚ್ಚೆತ್ತ ವಿನಯ್‌ ಕುಲಕರ್ಣಿ ಬೆಳಗಾವಿಯಲ್ಲಿ ಮಾತುಕತೆ ನಡೆಸಿ, ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿ, ಕಾಂಗ್ರೆಸ್ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಬೀದರ್ | ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರ ಜೊತೆಗೆ ತವಣಪ್ಪ ಮಾತನಾಡಿ, “ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ದೊರೆಯುತ್ತಿಲ್ಲ. ಹಾಲಿ ಬಿಜೆಪಿ ಶಾಸಕ ಅಮೃತ ದೇಸಾಯಿ ಅವರಿಗೆ ಮಣೆ ಹಾಕಲಾಗಿದೆ. ಆರು ಬಾರಿ ಸೋತಿದ್ದರೂ ನನ್ನಂತ ಸಾವಿರಾರು ಕಾರ್ಯಕರ್ತರು ಅವರನ್ನು ಶಾಸಕರನ್ನಾಗಿ ಮಾಡಿದ್ದೆವು. ಆದರೆ, ಬಿಜೆಪಿಯು ಕಾರ್ಯಕರ್ತರನ್ನು ಕಡೆಗಣಿಸಿದೆ. ನಮಗೆಲ್ಲ ಕಾಂಗ್ರೆಸ್ ನಾಯಕ ಜಾರಕಿಹೊಳಿ ಧೈರ್ಯ ತುಂಬಿದ್ದಾರೆ. ಅವರ ಮಾತಿನ ಮೇರೆಗೆ ಕಾಂಗ್ರೆಸ್ ಸೇರಿದ್ದು, ನಾಳೆ ನಾಮಪತ್ರ ಹಿಂಪಡೆಯುತ್ತೇನೆ” ಎಂದು ತಿಳಿಸಿದರು.

ಸತೀಶ ಜಾರಕಿಹೊಳಿ ಮಾತನಾಡಿ, “ಕಾಂಗ್ರೆಸ್‌ ವರಿಷ್ಠರ ಸೂಚನೆ ಮೇರೆಗೆ ತವನಪ್ಪ ಅವರೊಂದಿಗೆ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಅವರು ನಮ್ಮ ಪಕ್ಷದ ಪರ ಕೆಲಸ ಮಾಡಲಿದ್ದಾರೆ. ಬಿಜೆಪಿಯಿಂದ ಬಂಡಯವೆದ್ದು, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವರು ನಾಮಪತ್ರ ಹಿಂಪಡೆದು, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಯ ಅವರನ್ನು ಬೆಂಬಲಿಸದ್ದಾರೆ. ನಾವೇ ಮೊದಲು ಅಷ್ಟಗಿಯವರನ್ನೇ ಸಂಪರ್ಕ ಮಾಡಿದ್ದೆವು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...