ಬಿಜೆಪಿ ಕಾಲದ ಎಪಿಎಂಸಿ ಕಾಯ್ದೆ ರದ್ದು, ಹಳೆ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

Date:

Advertisements
  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಕಾಯ್ಧೆ ರದ್ದು
  • ರೈತ ಹಿತ ಕಾಪಾಡದ ಕಾಯ್ದೆ ನಮಗೆ ಬೇಡ ಎಂದ ಎಪಿಎಂಸಿ ಸಚಿವ

ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಿ ಹಳೆ ಎಪಿಎಂಸಿ ಕಾಯ್ದೆಯನ್ನೇ ಸುಧಾರಿತ ರೂಪದಲ್ಲಿ ಜಾರಿಗೆ ತರಲಾಗುವುದು ಎಂದು ಜವಳಿ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಇಂದು ಬಿಜೆಪಿ ಸರ್ಕಾರದ ಅವಧಿಯ ಎಪಿಎಂಸಿ ಕಾಯ್ಧೆ ರದ್ದು ಮಾಡುವುದು ಹಾಗೂ ಸುಧಾರಿತ ಹೊಸ ಕಾಯ್ಧೆ ಜಾರಿ ತರುವ ಸಂಬಂಧ, ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರನ್ನೊಳಗೊಂಡಿದ್ದ ಉನ್ನತ ಮಟ್ಟದ ಸಭೆ ಬಳಿಕ ಶಿವಾನಂದ ಪಾಟೀಲ್ ಈ ಮಾಹಿತಿ ನೀಡಿದರು.

ಜುಲೈ 3 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಎಪಿಎಂಸಿಯ ಹಳೆ ಕಾಯ್ದೆಯನ್ನು ಸುಧಾರಿತ ರೂಪದಲ್ಲಿ ಮಂಡಿಸಿ ಈಗಿರುವ ಕಾಯ್ದೆಯನ್ನು ರದ್ದುಗೊಳಿಸುವ ಪ್ರಕ್ರಿಯೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

Advertisements

ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಎಪಿಎಂಸಿ ಕಾಯ್ದೆಯನ್ನು ರದ್ದುಗೊಳಿಸಿ ಹಳೆ ಎಪಿಎಂಸಿ ಕಾಯ್ದೆಯನ್ನು ಜಾರಿಮಾಡುತ್ತಿದ್ದೇವೆ. ಈ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ರೈತ ವಿರೋಧಿ ಕೃಷಿ ಕಾಯ್ದೆಯನ್ನು ವಾಪಸ್ ಪಡೆದಿತ್ತು. ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಈ ಕಾಯ್ದೆಗಳನ್ನು ರದ್ದು ಮಾಡದೆ ಮುಂದುವರಿಸಿತ್ತು ಎಂದರು.ಎಪಿಎಂಸಿ ಕಾಯ್ದೆ ಮೀಟಿಂಗ್

ಈ ಕಾಯ್ದೆಗಳಿಂದ ರೈತರ ಕಲ್ಯಾಣ ಆಗಲಿಲ್ಲ, ಅವರ ಆದಾಯವೂ ದ್ವಿಗುಣವಾಗಲಿಲ್ಲ. ಜತೆಗೆ ಎಪಿಎಂಸಿ ವ್ಯವಸ್ಥೆಗೂ ತೊಂದರೆಯಾಯಿತು. ಹಾಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸಿದ್ದೆವು. ಇಂದಿನ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಮಾಡಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಎಪಿಎಂಸಿ ಕಾಯ್ದೆಯನ್ನು ಮಂಡನೆ ಮಾಡಿ ಸದನದ ಒಪ್ಪಿಗೆ ಪಡೆಯುತ್ತೇವೆ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಹರಿಯಾಣ | ರೈತರಿಗೆ ಮತ್ತೊಂದು ದಿಗ್ವಿಜಯ; ಆಂದೋಲನಕ್ಕೆ ಮತ್ತೆ ಮಣಿದ ಬಿಜೆಪಿ ಸರ್ಕಾರ

ಹಳೆಯ ಎಪಿಎಂಸಿ ಕಾಯ್ದೆಯಲ್ಲಿ ನ್ಯೂನತೆಗಳಿದ್ದರೆ ಅದನ್ನು ಸರಿಪಡಿಸಿ ಸುಧಾರಿತ ರೂಪದಲ್ಲಿ ಮಂಡನೆ ಮಾಡುತ್ತೇವೆ. ಹಳೆ ಕಾಯ್ದೆ ಇಡಿ ದೇಶಕ್ಕೆ ಮಾದರಿಯಾಗಿತ್ತು. ಈಗಲೂ ನೂತನ ತಿದ್ದುಪಡಿ ಕಾಯ್ದೆಯನ್ನು ಹಳೆ ಮಾದರಿಯಲ್ಲೇ ರೂಪಿಸುತ್ತೇವೆ. ಮುಂದಿನ ವಾರದೊಳಗೆ ಕಾಯ್ದೆಗೆ ಅಂತಿಮ ರೂಪುರೇಷೆ ನೀಡುವುದಾಗಿ ಅವರು ಹೇಳಿದರು.

ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯಿಂದ ಎಪಿಎಂಸಿ ಸಮಿತಿಗಳ ಸತ್ವ ಹಾಗೂ ಶಕ್ತಿ ಕುಂದಿತ್ತು. ಇದೊಂದು ಅಪಕ್ವವಾದ ಕಾಯ್ದೆಯಾಗಿತ್ತು. ಹಾಗಾಗಿಯೇ ಈ ಕಾಯ್ದೆಯನ್ನು ರದ್ದುಗೊಳಿಸಿ ಈ ಹಿಂದಿನ ಎಂಪಿಎಂಸಿ ಕಾಯ್ದೆಯನ್ನು ಮೂಲ ಸ್ವರೂಪದಲ್ಲೇ ಜಾರಿಮಾಡುತ್ತೇವೆ. ಅಗತ್ಯವಿದ್ದರೆ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X