ಆರ್‌ಎಸ್‌ಎಸ್‌-ಬಜರಂಗದಳದ ದಲಿತರು, ಶೂದ್ರರನ್ನು ಸೆಳೆಯಬೇಕಿದೆ: ಸತೀಶ್‌ ಜಾರಕಿಹೊಳಿ

Date:

  • ಒಂದು ಸಂಘಟನೆ ನಿಷೇಧಿಸಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ
  • ದಲಿತರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳಬೇಕು

“ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು ಸೆಳೆಯಬೇಕಿದೆ” ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರಿಗೆ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. ಆರ್‌ಎಸ್‌ಎಸ್‌ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಯಾವುದೇ ಸಂಘಟನೆ ಬ್ಯಾನ್ ಮಾಡುವುದು ನಮಗೆ ಪರಿಹಾರವಲ್ಲ” ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಈ ಎಲ್ಲ ಕಾಯ್ದೆಗಳ ಬಗ್ಗೆ ಚರ್ಚೆ ಆಗಬೇಕು. ತಕ್ಷಣವೇ ನಿಷೇಧ ಕಾಯ್ದೆ ಜಾರಿ ಅಸಾಧ್ಯ. ಈ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಆಗಬೇಕು. ಸಂಪೂರ್ಣ ಚರ್ಚೆ ಆದ ಮೇಲೆಯೇ ಈ ಸಂಬಂಧ ಸರ್ಕಾರದಿಂದ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಟ್ವೀಟ್‌ - ಆರ್‌ಎಸ್‌ಎಸ್‌

ಆರ್‌ಎಸ್‌ಎಸ್‌ನಿಂದ ದೇಶಭಕ್ತಿ ಕಲಿಯಲಿ : ಬಿಜೆಪಿ

ಸಚಿವ ಸತೀಶ್‌ ಜಾರಕಿಹೊಳಿ ಅವರ ಹೇಳಿಕೆ ಕುರಿತು ಟ್ಟಿಟ್ಟರ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ಆರ್‌ಎಸ್‌ಎಸ್‌ನ್ನು ನೆನೆಯದಿದ್ದರೆ ಕಾಂಗ್ರೆಸ್‌ ನಾಯಕರಿಗೆ ಜೀರ್ಣವಾಗುವುದಿಲ್ಲ. ಅಂದಹಾಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಇಲ್ಲಸಲ್ಲದ್ದನ್ನು ಊಹಿಸಿಕೊಂಡು ಮಾತನಾಡುವುದನ್ನು ಬಿಟ್ಟು, ಕಾಂಗ್ರೆಸಿನ ನಾಯಕರಿಗೆ ಅತೀವವಾಗಿ ಕೊರತೆ ಇರುವ ದೇಶಭಕ್ತಿಯನ್ನು ಆರ್‌ಎಸ್‌ಎಸ್‌ನಿಂದ ಕಲಿಯಲಿ” ಎಂದು ತಿರುಗೇಟು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...