ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಇಡಿ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ” ಎಂದು ವಿವರಿಸಿದರು.

“ನರೇಂದ್ರಮೋದಿಯವರ ಮಂತ್ರಿ ಮಂಡಲದಲ್ಲಿ ಕೇಂದ್ರ ಸಚಿವ ಆಗಿದ್ದ ಅನಂತಕುಮಾರ ಹೆಗ್ಡೆ, ‘ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಘೋಷಿಸಿದ್ದರು. ಈ ಘೋಷಣೆಯನ್ನು ಪ್ರಧಾನಿ ಮೋದಿಯವರಾಗಲೀ, ಅಮಿತ್ ಶಾ ಆಗಲೀ, ಬಿಜೆಪಿಯಾಗಲೀ, ಆರ್‌ಎಸ್‌ಎಸ್‌ ಆಗಲಿ ಖಂಡಿಸಲಿಲ್ಲ. ವಿರೋಧಿಸಲಿಲ್ಲ. ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಅಜೆಂಡಾವನ್ನು, ಉದ್ದೇಶವನ್ನು ಅನಂತಕುಮಾರ ಹೆಗ್ಡೆ ಬಾಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು” ಎಂದರು.

Advertisements

ಈ ಸದ್ದಿ ಓದಿದ್ದೀರಾ?: ಲೋಕಸಭಾ ಚುನಾವಣೆ | ಕಾಣೆಯಾಗಿದ್ದ ಹೆಗಡೆಗೆ ಸಿಗುವುದೇ ಟಿಕೆಟು; ಕಾಂಗ್ರೆಸ್‌ ಕೈ ಹಿಡಿಯುವುದೇ ಉ.ಕ?

“ಈ ದೇಶದ, ನಮ್ಮ ನಾಡಿನ ದುಡಿಯುವವರ ಹಕ್ಕುಗಳು, ಶ್ರಮಿಕರು, ರೈತರು, ಕಾರ್ಮಿಕರು ಮತ್ತು ಮಹಿಳಾ ಸಮುದಾಯದ ಅಸ್ತಿತ್ವ ಅಡಗಿರುವುದೇ ನಮ್ಮ ಸಂವಿಧಾನದಲ್ಲಿ. ಸಂವಿಧಾನ ಬದಲಾವಣೆಯಿಂದ ಈ ಎಲ್ಲಾ ಸಮುದಾಯಗಳು ಮರಳಿ ಗುಲಾಮಗಿರಿಗೆ ದೂಡಲ್ಪಡುತ್ತಾರೆ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ಶೂದ್ರ, ದಲಿತ ಮತ್ತು ಶ್ರಮಿಕರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿತ್ತು ಎನ್ನುವುದನ್ನು ಸ್ಮರಿಸಿಕೊಳ್ಳಿ” ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಇಂಡಿಯಾ ಒಕ್ಕೂಟದ ಮುಖಂಡ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಸಂವಿಧಾನ ರಕ್ಷಣೆ ಮಾಡಬೇಕಾದ ಅನಿವಾರ್ಯತೆ ಕುರಿತು ಜನರನ್ನು ಜಾಗೃತಗೊಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ರಾಜ್ಯದಲ್ಲಿರುವ ಶೇ.85ರಷ್ಟು ವಲಸೆ ಕಾರ್ಮಿಕರು ಈ ಆರು ರಾಜ್ಯಗಳಿಗೆ ಸೇರಿದವರು

ಇಡೀ ದೇಶದಲ್ಲೇ ಸುಮಾರು ಒಂದು ಲಕ್ಷ ನೋಂದಾಯಿತ ವಲಸೆ ಕಾರ್ಮಿಕರಿಗೆ ನೆಲೆಯಾಗಿರುವ...

‘ಅವರು RSS ಗೀತೆ ಹಾಡಬಹುದು, ಶಾ ಜೊತೆ ಕೂರಬಹುದು’; ಡಿಕೆಶಿ ವಿರುದ್ಧ ರಾಜಣ್ಣ ವಾಗ್ದಾಳಿ

“ಅವರು (ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ...

Download Eedina App Android / iOS

X