ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

Date:

Advertisements

“ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು “ಬಿಜೆಪಿಯ ‘400 ಪಾರ್’ ಸಿನಿಮಾವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ” ಎಂದು ಶನಿವಾರ ವ್ಯಂಗ್ಯವಾಡಿದ್ದಾರೆ.

“ಮಹಾಘಟಬಂಧನ್ ಮೊದಲ ಹಂತದಲ್ಲಿ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುತ್ತಿದೆ. ನಾವು ಬ್ಲಾಕ್ವಾರು ಸಭೆಗಳನ್ನು ನಡೆಸಿದ್ದೇವೆ ಮತ್ತು ಪ್ರತಿಕ್ರಿಯೆ ತುಂಬಾ ಚೆನ್ನಾಗಿದೆ. ಬಿಜೆಪಿಯ ‘400 ಪಾರ್’ ಚಿತ್ರವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ. ಬಿಹಾರದ ಜನರು ಜಾಗೃತರಾಗಿದ್ದು, ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದಿದ್ದಾರೆ.

“ಮೊದಲ ಹಂತದಲ್ಲಿ ಯಾವುದೇ ಪೈಪೋಟಿ ಇಲ್ಲ. ಬಿಹಾರ ಈ ಬಾರಿ ಆಘಾತಕಾರಿ ಫಲಿತಾಂಶ ನೀಡಲಿದೆ ಎಂದು ನಾವು ಮೊದಲೇ ಸಾಕಷ್ಟು ಬಾರಿ ಹೇಳಿದ್ದೆವು” ಎಂದು ತೇಜಸ್ವಿ ಯಾದವ್ ತಿಳಿಸಿದರು.

Advertisements

ಇದನ್ನು ಓದಿದ್ದೀರಾ?  400 ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ 420 ನಂಬರ್‌ನವರು: ನಟ ಪ್ರಕಾಶ್ ರಾಜ್

“ಅವರು (ಬಿಜೆಪಿ) ಬಿಹಾರದ ಜನರಿಗೆ ಏನನ್ನೂ ಮಾಡಿಲ್ಲ. 2014 ಮತ್ತು 2019 ರಲ್ಲಿ ಮೋದಿ ಅವರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಈಗ ಅವರ ಹೇಳಿಕೆಗಳು ಮತ್ತು ಸುಳ್ಳು ಭರವಸೆಗಳಿಂದ ಸಾರ್ವಜನಿಕರು ಬೇಸತ್ತಿದ್ದಾರೆ. ನಾವು ಬಿಹಾರಕ್ಕೆ ವಿಶೇಷ ಸ್ಥಾನಮಾನದ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತೇವೆ ಎಂದು ಭರವಸೆ ನೀಡಿದ್ದೇವೆ” ಎಂದು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದರು.

“ಮಹಾಘಟಬಂಧನ್ ಮತ್ತು ಇಂಡಿಯಾ ಬಣ ಒಟ್ಟಾಗಿ ಕೆಲಸ ಮಾಡುತ್ತಿವೆ. ಹಣದುಬ್ಬರ, ಬಡತನ ಮತ್ತು ಹೂಡಿಕೆಯ ಜೊತೆಗೆ ಬಿಹಾರದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ವಲಸೆ ಮತ್ತು ಪ್ರವಾಹದ ಸಮಸ್ಯೆಯೂ ಇದೆ. ಈ ಬಾರಿ ಬಿಜೆಪಿ ತುಂಬಾ ಚಿಂತೆಗೆ ಒಳಗಾಗಿದೆ” ಎಂದರು.

“ಅವರು (ಬಿಜೆಪಿ) ಸಂವಿಧಾನ ರದ್ದು ಮಾಡುವುದಾಗಿ ಹೇಳುತ್ತಾರೆ. ಯಾರು ಸಂವಿಧಾನವನ್ನು ನಾಶಪಡಿಸುತ್ತಾರೋ ಅವರೇ ನಾಶವಾಗುತ್ತಾರೆ” ಎಂದು ಯಾದವ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿಗೆ 100 ಕೋಟಿ ರೂ. ಕೊಟ್ಟು 14,400 ಕೋಟಿ ರೂ. ಗುತ್ತಿಗೆ ಪಡೆದ ಮೇಘಾ ಇಂಜಿನಿಯರಿಂಗ್ ಕಂಪನಿ

ಚುನಾವಣಾ ಆಯೋಗದ ಪ್ರಕಾರ, ಬಿಹಾರದಲ್ಲಿ ಮೊದಲ ಹಂತದಲ್ಲಿ ಶೇಕಡ 48.88ರಷ್ಟು ಮತದಾನವಾಗಿದೆ. ಜಮುಯಿ, ನವಾಡ, ಗಯಾ ಮತ್ತು ಔರಂಗಾಬಾದ್ ಎಂಬ ನಾಲ್ಕು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಜೆಡಿಯು ಮತ್ತು ಎಲ್‌ಜೆಪಿ ಒಳಗೊಂಡಿರುವ ಬಿಜೆಪಿ ನೇತೃತ್ವದ ಎನ್‌ಡಿಎ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಮಹಾಘಟಬಂಧನ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X