ಅಕ್ಕಿ ನೀಡುವ ವಿಚಾರದಲ್ಲಿ ಬಡವರ ಮೇಲೆ ಬಿಜೆಪಿ ಗದಾಪ್ರಹಾರ ಮಾಡುತ್ತಿದೆ: ಡಿಕೆ ಶಿವಕುಮಾರ್

Date:

Advertisements

ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿದ್ದಾರೆ. ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ. ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ ಎನ್ನುವುದು ಜನರಿಗೂ ಅರ್ಥವಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ಸದನದಲ್ಲಿ ಪ್ರತಿಭಟನೆಗೆ ಮಾಡಲು ಬಿಜೆಪಿ ನಿರ್ಧರಿಸಿರುವ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಅವರು ಪ್ರತಿಕ್ರಿಯಿಸಿ, “ಪ್ರತಿಭಟನೆ ಮಾಡಲಿ. ನಾವು ಅವರನ್ನು ತಡೆಯುವುದಿಲ್ಲ” ಎಂದರು.

“ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿದ್ದಾರೆ. ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ. ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ” ಎಂದು ಹೇಳಿದರು.

Advertisements

“ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ಕೊಡಲು ನಾವು ಮುಂದೆ ಬಂದಿದ್ದೇವೆ. ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. 5 ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ” ಎಂದರು.

“ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಮುಂದೆ ಬಂದರೆ ಸ್ವಾಗತ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಭಾವಿಸಿಕೊಳ್ಳುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X