ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

Date:

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ ಶ್ರಮಿಸಿದ್ದು ಕಾಂಗ್ರೆಸ್‌. ನಮಗೆ ಯಾರೂ ರಾಷ್ಟ್ರೀಯತೆಯನ್ನಾಗಲಿ, ದೇಶಭಕ್ತಿನ್ನಾಗಲಿ ಹೇಳಿಕೊಡಬೇಕಾಗಿಲ್ಲ. ಯಾರಾದರೂ ಪಾಕ್‌ ಪರ ಘೋಷಣೆ ಕೂಗಿರುವುದು ದೃಢಪಟ್ಟಲ್ಲಿ ಅಂಥವರಿಗೆ ಉಗ್ರ ಶಿಕ್ಷೆ ಕಾದಿದೆ. ಯಾರನ್ನೂ ರಕ್ಷಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಸೈಯದ್‌ ನಾಸಿರ್‌ ಹುಸೇನ್‌ ಅವರ ವಿಜಯೋತ್ಸವದ ಸಂದರ್ಭದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳಳಿಗೆ ಪ್ರತಿಕ್ರಿಯಿಸಿದ ಅವರು, “ವಿಧಾನಸೌಧದ ಆವರಣದಲ್ಲಿ ಯಾರಾದರೂ ಪಾಕಿಸ್ತಾನದ ಪರ ಜೈಕಾರ ಹಾಕಿರುವುದು ಸಾಬೀತಾದರೆ ಅಂಥವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಂತಹ ಶಕ್ತಿಗಳ ವಿರುದ್ಧ ಸರಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ತನಿಖೆ ಆರಂಭಿಸಲಾಗಿದೆ” ಎಂದರು.

“ಈಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದ್ದರಿಂದ ಈಗಲೇ ತೀರ್ಮಾನಕ್ಕೆ ಬಂದು, ಯಾರ ಮೇಲೋ ಗೂಬೆ ಕೂರಿಸುವುದು ಸರಿಯಲ್ಲ. ಆದರೆ, ಬಿಜೆಪಿ ಇದಕ್ಕೂ ರಾಜಕೀಯ ಬಣ್ಣ ಬಳಿಯುತ್ತಿದ್ದು, ಲಾಭ ಮಾಡಿಕೊಳ್ಳಲು ಹೊರಟಿದೆ. ಹಿಂದೆ ಇಂತಹ ಘಟನೆಗಳು ವರದಿಯಾದಾಗ ಅವುಗಳ ಹಿಂದೆ ನಿಜವಾಗಿಯೂ ಇದ್ದವರು ಬಿಜೆಪಿಯ ಭಾಗವಾಗಿರುವ ಶ್ರೀರಾಮ ಸೇನೆಯ ಕಾರ್ಯಕರ್ತರು ಎನ್ನುವುದು ಗೊತ್ತಾಯಿತು. ಅಂದಮಾತ್ರಕ್ಕೆ ಈ ಘಟನೆಯಲ್ಲಿ ಯಾರಿಗೂ ರಿಯಾಯಿತಿ ನೀಡಲು ನಾನು ನೋಡುತ್ತಿಲ್ಲ ಅಥವಾ ಇದರ ಹಿಂದೆಯೂ ಬಿಜೆಪಿಯವರೇ ಇದ್ದಾರೆ ಎಂದು ನಾನು ಹೇಳಲು ಹೋಗುವುದಿಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಈ ಘಟನೆಯನ್ನು ಎನ್‌ ಐಎ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಿದೆ. ಎನ್‌ ಐಎ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಯಾವ ಘಟನೆಯ ವಿಚಾರಣೆಗೂ ಅದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಅದಕ್ಕೆ ಬೇಕೆನಿಸಿದರೆ ಈ ಘಟನೆಯ ಕುರಿತೂ ಬಂದು ತನಿಖೆ ಮಾಡಲಿ. ಬೇಡ ಎಂದಿರುವವರಾರು? ಪ್ರತಿಪಕ್ಷದ ಸಾಲಿನಲ್ಲಿದ್ದಾಗ ಸಿಬಿಐ, ಇ.ಡಿ ಮುಂತಾದ ತನಿಖಾ ಸಂಸ್ಥೆಗಳನ್ನು ಬೈಯುತ್ತಿದ್ದ ಬಿಜೆಪಿ, ತಾನೇ ಅಧಿಕಾರದಲ್ಲಿರುವಾಗ ಇವುಗಳ ಮೂಲಕವೇ ತನ್ನ ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದೆ” ಎಂದು ಕಿಡಿಕಾರಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...