ಸಂವಿಧಾನಕ್ಕೆ ತಿದ್ದುಪಡಿ ತರಲು ಬಿಜೆಪಿ 400 ಸೀಟು ಗೆಲ್ಲಬೇಕು: ಸಂಸದ ಹೆಗಡೆ

Date:

Advertisements

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು. ಹೆಚ್ಚು ಸ್ಥಾನಗಳನ್ನು ಗೆದ್ದು, ಸಂವಿಧಾನದಲ್ಲಿ ಕಾಂಗ್ರೆಸ್‌ ಹೇರಿರುವ ವಿಚಾರಗಳನ್ನು ತೆಗೆದು ಹಾಕಬೇಕು ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯಕ್ಷ್ಯ ಆಗಿರುವ ಸಂಸದ ಹೆಗಡೆ, ಪದೇ-ಪದೇ ನಾಲಿಗೆ ಹರಿಬಿಡುತ್ತಿದ್ದಾರೆ. ಈ ಹಿಂದೆ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಇದೀಗ, ಮತ್ತೆ ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ. ಹಲವು ಅಂಶಗಳನ್ನು ಕಿತ್ತಾಕುತ್ತೇವೆ ಎಂದು ಮಾತನಾಡುತ್ತಿದ್ದಾರೆ.

ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ ಮಾತನಾಡಿದ ಅನಂತ ಹೆಗಡೆ, “ಸಂವಿಧಾನ ತಿದ್ದುಪಡಿಗೆ ಬಹುಮತ ಅಗತ್ಯ. ಲೋಕಸಭೆಯಲ್ಲಿ ಪೂರ್ಣ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಬಹುಮತವಿಲ್ಲ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು” ಎಂದಿದ್ದಾರೆ.

Advertisements

“ಸಂವಿಧಾನದಲ್ಲಿ ಬೇಡದೇ ಇರುವ ಅಂಶಗಳನ್ನು ಕಾಂಗ್ರೆಸ್‌ ಸೇರಿಸಿದೆ. ಇಡೀ ಹಿಂದು ಸಮಾಜವನ್ನು ದಮನಿಸುವ ರೀತಿ ಕಾನೂನು ಮಾಡಲಾಗಿದೆ. ಅದೆಲ್ಲವನ್ನೂ ಬದಲಿಸಬೇಕು” ಎಂದು ಸನಾತನಿ ಮತ್ತು ಮನುವಾದವನ್ನು ತುಂಬಬೇಕೆನ್ನುವ ಮಾತನಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

  1. ಸಂವಿಧಾನ ಬದಲಿಸುವ ನಿಮ್ಮ ಅಭಿಲಾಶೆ ಹುಚ್ಚುತನದ ಪರಮಾವಧಿ ಸಂಸದ ಅನಂತಕುಮಾರ್ ಜೀ. ಜಾತ್ಯತೀತ ಭಾರತದ ಬೇರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಚನೆಯ ಸಂವಿಧಾನ, ಹೀಗಾಗಿ ಸಂವಿಧಾನ ಬದಲಿಸುವ ಮುನ್ನ ನಿಮ್ಮ ಹುಚ್ಚುತನ ಬದಲಿದ್ರೆ ಉತ್ತಮ. ತಪ್ಪಿದ್ದಲ್ಲಿ ನಿಮ್ಮನ್ನೇ ಜನ್ರು ಬದಲಿಸಿ ಬಿಡ್ತಾರೆ… ಸಂಸದರಾಗಿರುವ ನೀವು ಸ್ಪಲ್ಪ ಗಂಭೀರವಾಗಿ ಯೋಚಿಸಿ ಮಾತನಾಡಿದ್ರೆ ಉತ್ತಮ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

‘ಭೂಮಿ ಯೋಜನೆ’ ಅರ್ಜಿಗಳ ತ್ವರಿತ ವಿಲೇವಾರಿ; ಹೊನ್ನಾವರ ರಾಜ್ಯಕ್ಕೆ ಪ್ರಥಮ

ಭೂಮಿ ಯೋಜನೆಯಡಿ ಸಾರ್ವಜನಿಕರ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಹೊನ್ನಾವರ ತಾಲ್ಲೂಕು ರಾಜ್ಯದಲ್ಲೇ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X