ಧನಕರ್, ಮಲಿಕ್ ಅವರನ್ನು ನಡೆಸಿಕೊಂಡ ರೀತಿಗೆ ಸರ್ಕಾರದ ವಿರುದ್ಧ ಟೀಕೆ; ಬಿಜೆಪಿ ವಕ್ತಾರ ಉಚ್ಛಾಟನೆ

Date:

Advertisements

ಮಾಜಿ ರಾಜ್ಯಪಾಲ ದಿ. ಸತ್ಯಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಡೆಸಿದ್ದ ಧೋರಣೆಯ ಬಗ್ಗೆ ಟೀಕಿಸಿದ್ದಕ್ಕಾಗಿ, ಬಿಜೆಪಿ ವಕ್ತಾರ ಕೃಷ್ಣಕುಮಾರ್ ಜಾನು ಅವರನ್ನು ಬಿಜೆಪಿ ಉಚ್ಚಾಟಿಸಿದೆ. ರಾಜಸ್ಥಾನದ ಜಾನು ಅವರು 6 ವರ್ಷಗಳ ಕಾಲ ಪಕ್ಷದ ಸಾಮಾನ್ಯ ಸದಸ್ಯವನ್ನೂ ಹೊಂದಿರುವುದಿಲ್ಲ ಎಂದು ಹೇಳಿದೆ.

ಇತ್ತೀಚೆಗೆ, ರಾಜಸ್ಥಾನದ ಜುಂಝುನು ಜಿಲ್ಲಾ ಅಧ್ಯಕ್ಷೆಯಾಗಿ ಹರ್ಷಿನಿ ಕುಲ್ಹಾರಿ ಅವರನ್ನು ನೇಮಿಸಿದ್ದನ್ನು ಜಾನು ಪ್ರಶ್ನಿಸಿದ್ದರು. ಆ ಕಾರಣಕ್ಕೆ, ಅವರಿಗೆ ಶೋಕಾಸ್ ನೋಟಿಸ್‌ ನೀಡಲಾಗಿತ್ತು. ಆದಾಗ್ಯೂ, ಬಿಜೆಪಿಯ ಧೋರಣೆಗಳನ್ನು ಜಾನು ಟೀಕಿಸಿದ್ದರು. ಕಳೆದ ತಿಂಗಳು ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದಾಗ, ಅವರಿಗೆ ಗೌರವಯುವ ವಿದಾಯ ನೀಡಿದ ಬಿಜೆಪಿ ನಡೆಸಿಕೊಂಡ ರೀತಿಯ ಬಗ್ಗೆಯೇ ಜಾನು ಅಸಮಧಾನ ವ್ಯಕ್ತಪಡಿಸಿದ್ದರು.

ಕಳೆದ ವಾರ, ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮೃತಪಟ್ಟಾಗ ಅವರ ಅಂತ್ಯಕ್ರಿಯೆ ನಡೆಸಿದ ರೀತಿ ಮತ್ತು ಸರಿಯಾದ ರೀತಿಯಲ್ಲಿ ಗೌರವ ಸಲ್ಲಿಸದ್ದರ ಬಗ್ಗೆಯೂ ಆಕ್ಷೇಪ ವ್ಯಕ್ತಪರಿಸಿದ್ದರು. ಹಿರಿಯ ನಾಯಕರನ್ನು ಬದಿಗಿಡುವ ಮೂಲಕ ಪ್ರಸ್ತುತ ನಾಯಕತ್ವವು ದಿಕ್ಕು ತಪ್ಪುತ್ತಿದೆ ಎಂದು ಟೀಕಿಸಿದ್ದರು.

Advertisements

“ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶವಂತ್ ಸಿನ್ಹಾ, ಪ್ರವೀಣ್ ತೊಗಾಡಿಯಾ, ಸಂಜಯ್ ಜೋಶಿ, ವಸುಂಧರಾ ರಾಜೆ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಿರಿಯ ನಾಯಕರನ್ನು ಬದಿಗೆ ತಳ್ಳಲು ಪಕ್ಷದ ಹಿರಿಯ ನಾಯಕತ್ವವೇ ಕಾರಣ. ತಳಮಟ್ಟದಲ್ಲಿ ಬಲಿಷ್ಠರಾಗಿದ್ದ ನಾಯಕರನ್ನು ಕೈಗೊಂಬೆಗಳನ್ನಾಗಿ ಮಾಡಲಾಗಿದೆ” ಎಂದು ಆರೋಪಿಸಿದ್ದರು. ಈ ಕಾರಣಗಳಿಗಾಗಿ ಜಾನು ಅವರು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದರು.

ಅವರ ವಿರುದ್ಧ ರಾಜಸ್ಥಾನ ಬಿಜೆಪಿಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಅಂಕುರ್ ಸಿಂಗ್ ಲಖವತ್ ಅವರು, “ಜಾನು ಪಕ್ಷದಲ್ಲಿ ಅಶಿಸ್ತು ತೋರಿಸಿದ್ದಾರೆ. ಅಲ್ಲದೆ, ಶೋಕಾಸ್ ನೋಟಿಸ್‌ಗೂ ಸರಿಯಾಗಿ ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಅವರನ್ನು ಉಚ್ಛಾಟನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X