ಉತ್ತರ ಕನ್ನಡ | ಮನೆ ಬಳಿ ಹೋದರೂ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ಗೇಟ್ ತೆರೆಯದ ಅನಂತ್‌ ಕುಮಾರ್ ಹೆಗಡೆ!

Date:

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ ಮುಖಂಡ ಅನಂತ್‌ ಕುಮಾರ್ ಹೆಗಡೆಯವರ ಬದಲಿಗೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹೊಸ ತಲೆನೋವು ಆರಂಭವಾಗಿದೆ.

- Advertisement -

ಚುನಾವಣೆಯ ದೃಷ್ಟಿಯಿಂದ ತಮ್ಮ ಪರ ಪ್ರಚಾರ ನಡೆಸಲು ಬಿಜೆಪಿಯ ಶಾಸಕರು ಹಾಗೂ ಸಂಸದರ ಬೆಂಬಲ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಯಾರೂ ಕೂಡ ಕಾಗೇರಿಯವರ ಸಂಪರ್ಕಕ್ಕೇ ಸಿಗುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ಬೇಸರಿಸಿಕೊಂಡಿರುವ ಬಗ್ಗೆ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶಾಸಕ, ಸಂಸದರ ಮನವೊಲಿಸಿ, ಪಕ್ಷದ ಪರ ಪ್ರಚಾರ ನಡೆಸುವುದು ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ  ದೊಡ್ಡ ಸವಾಲಾಗಿದೆ. ಯಾರೂ ಕೂಡ ಕಾಗೇರಿಯವರ ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಅಲ್ಲದೇ, ಮನೆಗೆ ಹೋದರೆ ಗೇಟನ್ನೇ ತೆರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಉತ್ತರ ಕನ್ನಡದಲ್ಲಿ ಬಿಜೆಪಿಯ ಈ ಸದ್ಯದ ಪರಿಸ್ಥಿತಿ ನೋಡಿ ಲೋಕಸಭೆ ಚುನಾವಣೆಯಲ್ಲಿ ಗೆಲುವನ್ನು ತಮ್ಮದಾಗಿಸುವಲ್ಲಿ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದೆ.

kageri and anant kumar hegde

ಹಾಲಿ ಸಂಸದ ಸಂಸದ ಅನಂತಕುಮಾರ್ ಹೆಗಡೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರಿಗೂ ಸಿಗದಂತಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ನಿರಂತರವಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದ ಅನಂತ್ ಕುಮಾರ್ ಹೆಗಡೆ, ಟಿಕೆಟ್ ತಪ್ಪುವ ಸುಳಿವು ಸಿಕ್ಕಿದ ಬೆನ್ನಲ್ಲೇ ಮೌನಕ್ಕೆ ಶರಣಾಗಿದ್ದರು. ಟಿಕೆಟ್ ಘೋಷಣೆಯಾಗುವುದಕ್ಕೂ ಮೂರ್ನಾಲ್ಕು ದಿನಗಳ ಮೊದಲಿನಿಂದಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇಷ್ಟೇ ಅಲ್ಲದೆ, ಕಾರ್ಯಕರ್ತರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮನೆಗೆ ಯಾರೆ ಬಂದರೂ ಒಳಗೆ ಬಿಡದಂತೆ ತಮ್ಮ ಮನೆಯ ‘ಸೆಕ್ಯೂರಿಟಿ ಗಾರ್ಡ್‌’ಗೆ ಸಂಸದ ಹೆಗಡೆ ಸೂಚಿಸಿದ್ದಾರೆ ಎಂಬ ಮಾತು ಕೂಡ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ.

ಇದೀಗ ಸಂಸದರ ಮೌನ ಹಾಗೂ ತಮ್ಮದೇ ಪಕ್ಷದ ಕೆಲವು ಶಾಸಕರು ಸಂಪರ್ಕಕ್ಕೆ ಸಿಗದಿರುವುದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಲೆನೋವಾಗಿ ಪರಿಣಮಿಸಿದೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕಾಗೇರಿ, “ನಾನು ಮತ್ತು ಅನಂತಕುಮಾರ್ ಹೆಗಡೆ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದೇವೆ. ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಆದರೆ, ಕಾಗೇರಿ ಭೇಟಿಗೂ ಅವಕಾಶ ನೀಡದೇ, ಕರೆಯೂ ಸ್ವೀಕರಿಸದೇ ಹೆಗಡೆ ಸಂಪೂರ್ಣ ಮೌನವಾಗಿರುವುದು ಈಗ ಅವರನ್ನು ಸಂಕಷ್ಟಕ್ಕೆ ದೂಡಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 28 ವರ್ಷಗಳ ಬಳಿಕ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿತ್ತು.

ಈ ಮಧ್ಯೆ, ಸಂಸದ ಅನಂತಕುಮಾರ್ ಹೆಗಡೆ ಮನೆ ಬಳಿ ಹೋಗಿ ಕಾಗೇರಿ ಅರ್ಧ ಗಂಟೆ ಕಾದರೂ ಸೌಜನ್ಯಕ್ಕೂ ಗೇಟ್ ತೆರೆಸಿ ಅವರ ಬಳಿ ಮಾತನಾಡಿಲ್ಲ ಎಂದು ತಿಳಿದುಬಂದಿದೆ. ಅನಂತಕುಮಾರ್ ಹೆಗಡೆ ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೂಡ ಹೆಗಡೆ ಇದೇ ರೀತಿ ಮೌನವಾಗಿದ್ದರಿಂದ ಕಾಗೇರಿ ಸೋಲನುಭವಿಸಬೇಕಾಗಿ ಬಂದಿತ್ತು. ಇದೀಗ ಮತ್ತೆ ಹೆಗಡೆ ಮೌನವಾಗಿರುವುದು ಮತ್ತೊಮ್ಮೆ ಕಾಗೇರಿ ಆತಂಕಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಸಿಎಂ ಹುದ್ದೆಯಿಂದ ಕೇಜ್ರಿವಾಲ್ ಪದಚ್ಯುತಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಈ ನಡುವೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಕೂಡ ಕಾಗೇರಿ ಕೈಗೆ ಸಿಗದೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಬುಧವಾರ ಯಲ್ಲಾಪುರದಲ್ಲೇ ಬಿಜೆಪಿ ಅಭ್ಯರ್ಥಿ ಪರ ಸಭೆ ನಡೆದರೂ ಶಿವರಾಂ ಹೆಬ್ಬಾರ್ ಗೈರಾಗಿದ್ದರು. ಈ ಎಲ್ಲ ಬೆಳವಣಿಗೆಯ ನಡುವೆ ಕಾಂಗ್ರೆಸ್ ಗೆಲುವನ್ನು ತಮ್ಮದಾಗಿಸುವಲ್ಲಿ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ತಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....