ಲೋಕಸಭಾ ಚುನಾವಣೆ | ಮುಂದಿನ ವಾರ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವರದಿ

Date:

Advertisements

ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿಯು ಮುಂದಿನ ಗುರುವಾರ 100 ಅಭ್ಯರ್ಥಿಗಳ ಹೆಸರಿರುವ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ನಿರೀಕ್ಷಿತ ಘೋಷಣೆಗೆ ಮುಂಚಿತವಾಗಿ, ಬಿಜೆಪಿ ಗುರುವಾರ 100 ಅಭ್ಯರ್ಥಿಗಳ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ” ಮೂಲಗಳು ತಿಳಿಸಿರುವುದಾಗಿ ವರದಿಯಲ್ಲಿ ಎನ್‌ಡಿಟಿವಿ ತಿಳಿಸಿವೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆಬ್ರವರಿ 29ರಂದು ಸಭೆ ಸೇರುವ ಸಾಧ್ಯತೆಯಿದೆ. ಆ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

Advertisements

ಪ್ರಧಾನಿ ಮೋದಿ ಅವರು ಕಳೆದ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಿ, ಸಂಸದರಾಗಿದ್ದರು. ವಾರಣಾಸಿಯಿಂದ ಎರಡು ಬಾರಿ ಗೆದ್ದಿದ್ದಾರೆ. ಅಮಿತ್ ಶಾ ಅವರು 2019 ರ ಚುನಾವಣೆಯಲ್ಲಿ ಗುಜರಾತ್‌ನ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅದುವರೆಗೂ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅಲ್ಲಿಂದ ಸ್ಪರ್ಧಿಸುತ್ತಿದ್ದರು.

ಮೊದಲ ಪಟ್ಟಿಯು ನಿರ್ಣಾಯಕವಾಗಿದ್ದು, ಎನ್‌ಡಿಎ ಮೈತ್ರಿಕೂಟವು 543 ಲೋಕಸಭಾ ಸ್ಥಾನಗಳ ಪೈಕಿ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.

ಕಳೆದ ವಾರ, 370 ಸ್ಥಾನಗಳನ್ನು ಗೆಲ್ಲುವ ಪಕ್ಷದ ಗುರಿಯನ್ನು ಈಡೇರಿಸಲು ಶ್ರದ್ಧೆಯಿಂದ ಕೆಲಸ ಮಾಡಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಮುಂದಿನ 100 ದಿನಗಳು ನಿರ್ಣಾಯಕವಾದವು ಎಂದು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ಸೇರುವ ವದಂತಿ ನಡುವೆಯೇ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಜೆಡಿಎಸ್‌ ಶಾಸಕ

“ಮುಂದಿನ 100 ದಿನಗಳಲ್ಲಿ ನಾವೆಲ್ಲರೂ ಪ್ರತಿಯೊಬ್ಬ ಹೊಸ ಮತದಾರರನ್ನು, ಪ್ರತಿಯೊಬ್ಬ ಫಲಾನುಭವಿ, ಪ್ರತಿ ಸಮುದಾಯವನ್ನು ತಲುಪಬೇಕು. ನಾವು ಎಲ್ಲರ ವಿಶ್ವಾಸ ಗೆಲ್ಲಬೇಕು. ಎನ್‌ಡಿಎ ಕೂಟದ ಸ್ಥಾನವನ್ನು 400ಕ್ಕೆ ಕೊಂಡೊಯ್ಯಲು ಹಾಗೂ ಬಿಜೆಪಿ 370 ಕ್ಷೇತ್ರಗಳನ್ನು ಗೆಲ್ಲಲು ಶ್ರಮಿಸಬೇಕು” ಎಂದು ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X