2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

Date:

Advertisements

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, “ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ” ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವಾದ 2025 ರ ವೇಳೆಗೆ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

“2025ರ ವೇಳೆಗೆ ಆರ್‌ಎಸ್‌ಎಸ್‌ 100 ವರ್ಷ ಪೂರೈಸಲಿದೆ. 2025ರ ವೇಳೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತು ಹಾಕಲು ಪ್ರಯತ್ನಿಸುತ್ತಿದ್ದಾರೆ. ಹಲವು ಬಾರಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರು ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ” ಎಂದು ಗುರುವಾರ ಸಾರ್ವಜನಿಕ ಸಭೆಯಲ್ಲಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಹಿಂದುಳಿದ ವರ್ಗಗಳಿಗೆ (ಬಿಸಿ) ಮೀಸಲಾತಿಯನ್ನು ಪ್ರಸ್ತಾಪಿಸಿದ ಮಂಡಲ್ ಆಯೋಗದ ವರದಿಯ ಅನುಷ್ಠಾನವನ್ನು ಬಿಜೆಪಿ ಈ ಹಿಂದೆ ಸ್ಥಗಿತಗೊಳಿಸಿತ್ತು. ಈಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಕೋಟಾಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಅಧಿಕ ಸಂಖ್ಯೆಯಲ್ಲಿರುವುದು ಮುಖ್ಯ. ಅದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ” ಎಂದು ಈ ಸಂದರ್ಭದಲ್ಲೇ ರೇವಂತ್ ರೆಡ್ಡಿ ಆರೋಪಿಸಿದರು.

“ಮೀಸಲಾತಿಯನ್ನು ರದ್ದುಪಡಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಕೆಲವೇ ಜನರು ಬೆಂಬಲಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆಗಳು ಎಸ್‌ಸಿ, ಎಸ್‌ಟಿ, ಬಿಸಿ ಮೀಸಲಾತಿಯ ಜನಾಭಿಪ್ರಾಯ” ಎಂದರು.

ಇನ್ನು ಬುಧವಾರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಕಾಂಗ್ರೆಸ್ ಎಸ್‌ಸಿ/ಎಸ್‌ಟಿ/ಒಬಿಸಿಗಳಿಂದ ಮೀಸಲಾತಿಯನ್ನು ಕಿತ್ತು ತನ್ನ ವಿಶೇಷ ವೋಟ್ ಬ್ಯಾಂಕ್‌ಗೆ ನೀಡಲು ಬಯಸುತ್ತದೆ” ಎಂದು ಪ್ರಧಾನಿ ಆರೋಪಿಸಿದ್ದರು. ಧರ್ಮದ ಆಧಾರದ ಮೇಲೆ ಮೀಸಲಾತಿ ನೀತಿಗಳನ್ನು ರಾಜಕೀಯಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ದೂರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X