ಮಧ್ಯಪ್ರದೇಶ | ಲೈಂಗಿಕ ದೌರ್ಜನ್ಯದ ಆರೋಪ; ಬಿಜೆಪಿ ಮುಖಂಡ ಉಚ್ಚಾಟನೆ

Date:

Advertisements

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅದಾದ ಬೆನ್ನಲ್ಲೇ ಅವರನ್ನು ಬಿಜೆಪಿಯಿಂದ ಹೊರಹಾಕಲಾಗಿದೆ.

ಬಿಜೆಪಿ ಮುಖಂಡ ಸುರೇಶ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 74 (ಮಹಿಳೆಯ ಮಾನಹಾನಿ ಮಾಡುವ ಉದ್ದೇಶದಿಂದ ಬಲವಂತ), ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಗಾಯತ್ರಿ ತಿವಾರಿ ಸೋಮವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾಗೆಯೇ ಸಂಪೂರ್ಣ ತನಿಖೆಯ ನಂತರ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ

Advertisements

ಈ ನಡುವೆ ಬಿಜೆಪಿಯ ಸಿಧಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಸಿಂಗ್ ಅವರನ್ನು ಭಾನುವಾರ ರಾಜ್ಯ ಘಟಕದ ಮುಖ್ಯಸ್ಥ ವಿಡಿ ಶರ್ಮಾ ಅವರು ಹುದ್ದೆಯಿಂದ ತೆಗೆದುಹಾಕಿರುವುದಾಗಿ ಹೇಳಿದ್ದಾರೆ.

ಇನ್ನು ಸುರೇಶ್ ಸಿಂಗ್ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ಇವೆಲ್ಲವೂ ಆರೋಪಗಳು ಎಂದಿದ್ದಾರೆ. ಪಕ್ಷದ ಸಹೋದ್ಯೋಗಿ ರಚಿಸಿರುವ ಪಿತೂರಿ. ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಸೇನೆಯಿಂದ ನಿವೃತ್ತರಾದ ನಂತರ ಕಳೆದ ಎರಡು ದಶಕಗಳಿಂದ ನಾನು ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ. ಕ್ರಮ ಕೈಗೊಳ್ಳುವ ಮೊದಲು ಪಕ್ಷವು ನನ್ನಲ್ಲಿ ಈ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ಕೇಳಿಲ್ಲ. ತನಿಖೆಗೆ ನಾನು ಸಂಪೂರ್ಣವಾಗಿ ಸಹಕರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X