ಕ್ರೈಸ್ತ ಸಮುದಾಯದ ಮೇಲೆ ಬಿಜೆಪಿಯ ಪ್ರಭಾವ ಹೆಚ್ಚಳ; ತುರ್ತು ಕ್ರಮ ಅಗತ್ಯ: ಸಿಪಿಐಎಂ

Date:

Advertisements

ದೇಶಾದ್ಯಂತ ಕ್ರೈಸ್ತ ಅಲ್ಪಸಂಖ್ಯಾತರ ಮೇಲೆ ಬಿಜೆಪಿಯ ಪ್ರಭಾವ ಅಧಿಕವಾಗುತ್ತಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಹೇಳಿದೆ.

ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಸಿಪಿಐಎಂನ ಎರಡನೇ ದಿನದ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ಪ್ರಾಥಮಿಕವಾಗಿ ಬಿಜೆಪಿ-ಆರ್‌ಎಸ್‌ಎಸ್‌ನ ಹಿಂದುತ್ವ ಅಭಿಯಾನವನ್ನು ಎದುರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಕ್ರೈಸ್ತ ಸಮುದಾಯದ ಮೇಲೆಯೂ ಹಿಂದುತ್ವದ ಪ್ರಭಾವದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಇದನ್ನು ಓದಿದ್ದೀರಾ? ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

Advertisements

“ಕೇರಳವನ್ನು ಹೊರತುಪಡಿಸಿ ದೇಶಾದ್ಯಂತ ಬಿಜೆಪಿ ಮತ್ತು ಬಲಪಂಥೀಯ ರಾಜಕೀಯ ಬಲಗೊಂಡಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ, ಕೇರಳದಲ್ಲಿಯೂ ಹಿಂದುತ್ವ ಶಕ್ತಿಗಳು ನೆಲೆ ಕಂಡುಕೊಳ್ಳುತ್ತಿವೆ ಎಂಬುದು ಸಾಬೀತಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದರು.

ದೇಶದ ಇತರ ಭಾಗಗಳಲ್ಲಿ ಕೇರಳ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುವಲ್ಲಿ ವಿಫಲವಾದ ಕೇಂದ್ರ ಸಮಿತಿಯ (ಸಿಸಿ) ವಿರುದ್ಧ ಟೀಕೆಗಳು ಕೇಳಿಬಂದವು. ಕೇರಳದ ಪರವಾಗಿ ಮಾತನಾಡಿದ ಕೆಕೆ ರಾಗೇಶ್, ಕೇರಳದಲ್ಲಿ ಸಿಪಿಐಎಂ ಚಳುವಳಿ ಬಗ್ಗೆ ಪ್ರಸ್ತಾಪಿಸಿದರು. ಆದರೆ ಕೇರಳ ಸರ್ಕಾರದ ಕಾರ್ಯಕ್ಷಮತೆಯನ್ನು ಇತರ ಪ್ರದೇಶಗಳಿಗೆ ಪರಿಣಾಮಕಾರಿಯಾಗಿ ತಿಳಿಸಲಾಗುತ್ತಿಲ್ಲ ಎಂದು ಉತ್ತರ ಪ್ರದೇಶದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು. ಮಹಿಳಾ ಪ್ರಾತಿನಿಧ್ಯದ ಬಗ್ಗೆ ತೆಲಂಗಾಣ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.

ಈ ನಡುವೆ ತೀವ್ರವಾದಿ ಇಸ್ಲಾಮಿಕ್ ಸಂಘಟನೆಗಳ ಬಲವರ್ಧನೆಯ ಬಗ್ಗೆಯೂ ಕಳವಳ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಪ್ರತಿನಿಧಿಗಳು ಬಿಜೆಪಿ ಪ್ರಬಲವಾದಂತೆ ಮುಸ್ಲಿಂ ತೀವ್ರವಾದ ಹೆಚ್ಚಾಗುತ್ತದೆ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X