ರಾಮನಗರ | ಪಶು ಚಿಕಿತ್ಸಾ ವಾಹನದ ಮೇಲೆ ಮೋದಿ ಮುಖ ಕಾಣುತ್ತಿಲ್ಲವೆಂದು ಬಿಜೆಪಿಗರ ಪ್ರತಿಭಟನೆ

Date:

Advertisements

ಸಂಚಾರಿ ಪಶು ಚಿಕಿತ್ಸಾಲಯದ ವಾಹನದ ಮೇಲೆ ಅಂಟಿಸಲಾಗಿರುವ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ ಮುಖ ಸರಿಯಾಗಿ ಕಾಣುತ್ತಿಲ್ಲ. ಅವರ ಮುಖವನ್ನು ಕಾಣದಂತೆ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಪಶು ಚಿಕಿತ್ಸಾಲಯ ವಾಹನವನ್ನು ತಡೆದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಾಹನದ ಮೇಲೆ ಹತ್ತಿ ದಾಂಧಲೆ ನಡೆಸಿದ್ದಾರೆ.

ಹುಬ್ಬಳ್ಳಿಯನ್ನು ಕರಸೇವಕರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಅದೇ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಪಶು ಚಿಕಿತ್ಸಾಲಯ ವಾಹನದ ಮೇಲಿನ ಪೋಸ್ಟರ್‌ನಲ್ಲಿ ಮೋದಿ ಫೋಟೋ ಸರಿಯಾಗಿ ಕಾಣದೇ ಇರುವುದನ್ನು ಗಮನಿಸಿ, ವಾಹನ ತಡೆದಿದ್ದಾರೆ.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಶುಸಂಗೋಪನ ಸಚಿವ ಕೆ ವೆಂಕಟೇಶ್ ವಿರುದ್ಧ ಘೊಷಣೆ ಕೂಗಿದ್ದಾರೆ. ಬಿಜೆಪಿ ಸದಸ್ಯೆಯೊಬ್ಬರು ವಾಹನದ ಮೇಲಿನ ಪೋಸ್ಟರ್‌ನಲ್ಲಿದ್ದ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಂಚಾರಿ ಪಶು ಚಿಕಿತ್ಸಾಲಯವು ಕೇಂದ್ರ ಸರ್ಕಾರದ ಅನುದಾನದಿಂದ ಅನುಷ್ಠಾನ ಆಗಿದ್ದರೆ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಪಶುಸಂಗೋಪನಾ ಇಲಾಖೆ ಸಚಿವರ ಭಾವಚಿತ್ರಕ್ಕೆ ಸಮನಾಗಿ ಪ್ರಧಾನ ಮಂತ್ರಿಗಳ ಭಾವಚಿತ್ರವನ್ನೂ ಹಾಕುವುದು ಶಿಷ್ಟಾಚಾರ. ಹಾಗೇನಾದರೂ ಶಿಷ್ಟಾಚಾರ ಉಲ್ಲಂಘನೆ ಆಗಿದ್ದರೆ ರಾಜ್ಯದ ಮುಖ್ಯಮಂತ್ರಿಗಳೇ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಈ ಯೋಜನೆ ರಾಜ್ಯ ಸರ್ಕಾರದ್ದಾಗಿದ್ದರೆ ಈ ಘಟನೆ ತಪ್ಪು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X