- ಕಾಂಗ್ರೆಸ್ ಪ್ರಚಾರಕ್ಕೆ ಅಡ್ಡಿ ಮಾಡಿದ ಬಿಜೆಪಿ ಕಾರ್ಯಕರ್ತರು
- ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ಬಿಜೆಪಿ ಕಾಂಗ್ರೆಸ್ ದ್ವೇಷ ರಾಜಕಾರಣ ಆರಂಭವಾಗಿದೆ.
ಚುನಾವಣಾ ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿಗೌಡ ಪತ್ನಿ ಹಾಗೂ ಕಾರ್ಯಕರ್ತರ ಮೇಲೆ ಬಿಜೆಪಿ ಗೂಂಡಾಗಿರಿ ಪ್ರದರ್ಶಿಸಿದೆ.
ಇಂದು ಬೆಳಗ್ಗೆ ಹೊಂಗಸಂದ್ರ ಗ್ರಾಮದಲ್ಲಿ ಪ್ರಚಾರ ನಿರತರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿಗೌಡ, ಪತ್ನಿ ಸ್ಮಿತಾ ಪ್ರಚಾರ ಮಾಡುತ್ತಿದ್ದ ವೇಳೆ ಎದುರಾದ ಬಿಜೆಪಿ ಬೆಂಬಲಿಗರು, ಪ್ರಚಾರ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಬಳಿಕ ಕಾರಿನಿಂದ ಕೆಳಗಿಳಿದು ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಸ್ಮಿತಾ ಅವರ ಮೇಲೂ ಗೂಂಡಾಗಿರಿ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಅವರ ಕೈ ಹಿಡಿದು ಎಳೆದಾಡಿ, ಧಿಕ್ಕಾರ ಕೂಗಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಬೆಂಗಳೂರಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ?
ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದ್ದರೆನ್ನುವುದು ಪ್ರತ್ಯಕ್ಷದರ್ಶಿಗಳ ಮಾಹಿತಿ. ಇತ್ತ ಘಟನೆ ಖಂಡಿಸಿರುವ ಸ್ಮಿತಾ ಉಮಾಪತಿಗೌಡ, ಈ ಬಗ್ಗೆ ದೂರು ದಾಖಲು ನಿರ್ಧರಿಸಿದ್ದಾರೆ.