ಶಿಂದೆ ಟೀಕೆ ವಿವಾದ | ಕುನಾಲ್ ಕಾಮ್ರಾಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಅಳಿಸಿ ಹಾಕಿದ ‘ಬುಕ್‌ಮೈಶೋ’

Date:

Advertisements

ಆನ್‌ಲೈನ್ ಟಿಕೆಟ್‌ ಮಾಡುವ ಪ್ಲಾಟ್‌ಫಾರ್ಮ್ ಆದ ಬುಕ್‌ಮೈಶೋ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಅಳಿಸಿಹಾಕಿದೆ. ತನ್ನ ವೆಬ್‌ಸೈಟ್‌ನಲ್ಲಿದ್ದ ಕಲಾವಿದರ ಪಟ್ಟಿಯಿಂದ ಕುನಾಲ್ ಕಾಮ್ರಾ ಹೆಸರನ್ನೂ ತೆಗೆದುಹಾಕಿದೆ ಎಂದು ವರದಿಯಾಗಿದೆ.

ಯುವ ಶಿವಸೇನೆ ಪ್ರಧಾನ ಕಾರ್ಯದರ್ಶಿ ರಾಹುಲ್ ಎನ್ ಕನಾಲ್ ಬುಕ್‌ಮೈಶೋಗೆ ಇತ್ತೀಚೆಗೆ ಪತ್ರ ಬರೆದಿದ್ದು, ಅದಾದ ಬಳಿಕ ಈ ಕ್ರಮಕೈಗೊಳ್ಳಲಾಗಿದೆ. ಕುನಾಲ್ ಕಾರ್ಯಕ್ರಮಗಳಿಗೆ ಟಿಕೆಟ್ ಮಾರಾಟವನ್ನು ಮಾಡಬಾರದು ಎಂದು ಒತ್ತಾಯಿಸಿ ರಾಹುಲ್ ಪತ್ರ ಬರೆದಿದ್ದರು.

ಇದನ್ನು ಓದಿದ್ದೀರಾ? ‘ಯಾರು ಅವರು, 2 ನಿಮಿಷದ ಕಾಮೆಡಿಯನ್’: ಕುನಾಲ್ ಕಾಮ್ರಾ ಬಗ್ಗೆ ಕಂಗನಾ ರಣಾವತ್ ಕಿಡಿ

Advertisements

ಏಪ್ರಿಲ್ 2ರಂದು ಈ ಪತ್ರವನ್ನು ಬರೆಯಲಾಗಿದ್ದು, ಕುನಾಲ್ ಕಾರ್ಯಕ್ರಮದಿಂದ ಸಾರ್ವಜನಿಕರ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. “ಬುಕ್‌ಮೈಶೋ ಈ ಹಿಂದೆ ಆಕ್ರಮಣಕಾರಿಯಾಗಿ ಮಾತನಾಡುವ ಕುನಾಲ್ ಕಾಮ್ರಾ ಶೋಗಳ ಟಿಕೆಟ್ ಮಾರಾಟಕ್ಕೆ ಅವಕಾಶ ನೀಡಿದೆ ಎಂದು ತಿಳಿದುಬಂದಿದೆ. ಆದರೆ ಅವರು ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಇತರೆ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಅವರ ಟಿಕೆಟ್ ಮಾರಾಟಕ್ಕೆ ಅವಕಾಶ ನೀಡಬಾರದು” ಎಂದು ಉಲ್ಲೇಖಿಸಲಾಗಿದೆ.

ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ದ್ರೋಹಿ ಎಂದು ತನ್ನ ಕಾರ್ಯಕ್ರಮವೊಂದರಲ್ಲಿ ಕುನಾಲ್ ಕಾಮ್ರಾ ಹೇಳಿದ್ದರು. ಎಲ್ಲಿಯೂ ಶಿಂದೆ ಹೆಸರನ್ನು ಉಲ್ಲೇಖಿಸದ ಕುನಾಲ್ ‘ಥಾಣೆಯ ನಾಯಕ’ ಎಂದು ಹೇಳಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಕಾರ್ಯಕ್ರಮ ನಡೆದ ಸ್ಟುಡಿಯೋವನ್ನು ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಕುನಾಲ್‌ಗೆ ಶಿವಸೇನೆ ನಾಯಕರು ಜೀವ ಬೆದರಿಕೆ ಕೂಡಾ ಹಾಕಿದ್ದರು.

ಇವೆಲ್ಲವುದರ ನಡುವೆ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ನಾಯಕರುಗಳು ಹಲವು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವಿಚಾರಣೆಗಾಗಿ ಪೊಲೀಸರು ಒಟ್ಟು ಮೂರು ಬಾರಿ ಸಮನ್ಸ್ ನೀಡಿದ್ದು, ಕುನಾಲ್ ವಿಚಾರಣೆ ಹಾಜರಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X