ಬ್ರ್ಯಾಂಡ್ ಬೆಂಗಳೂರು | ಐಡಿಯಾಥಾನ್ 2023 ಸ್ಪರ್ಧೆಗೆ ಏಳು ಶಾಲಾ ತಂಡಗಳು ಆಯ್ಕೆ

Date:

Advertisements

ತಮ್ಮ ನಗರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ನಾಗರಿಕ ಚಟುವಟಿಕೆಯಲ್ಲಿ ಶಾಲಾ ಮಕ್ಕಳ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ “ಬ್ರ್ಯಾಂಡ್ ಬೆಂಗಳೂರು ಐಡಿಯಾಥಾನ್ 2023” ಸ್ಪರ್ಧೆಯ ಅಂತಿಮ ಸುತ್ತಿಗೆ ಏಳು ಶಾಲಾ ತಂಡಗಳು ಆಯ್ಕೆಯಾಗಿವೆ.

ಕರ್ನಾಟಕ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆಯ ಮೂಲಕ ಬೆಂಗಳೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸುಸ್ಥಿರ ನಗರವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಐಡಿಯಾಥಾನ್ 2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದೊಂದು ಅಂತರ್‌ ಶಾಲಾ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಯಲ್ಲಿ ನಗರದ ಸಮಸ್ಯೆಗಳಿಗೆ ಶಾಲಾ ಮಕ್ಕಳು ಪರಿಹಾರ ನೀಡುವ ಅವಕಾಶ ಕಲ್ಪಿಸಿಕೊಟ್ಟಿದೆ. ಆಮೂಲಕ ಮಕ್ಕಳ ಮಿದುಳಿನ ಸಾಮರ್ಥ್ಯ ಪೋಷಿಸುವ ಪ್ರಯತ್ನವಾಗಿದೆ.

Advertisements

9ನೇ ತರಗತಿಯಿಂದ 12+ ಪಿಯುಸಿ ಕಾಲೇಜು ಮಕ್ಕಳ ಸ್ಪರ್ಧೆ ಇದಾಗಿದ್ದು, ಶ್ರೀಮತಿ ಐಶ್ವರ್ಯ ಡಿಕೆಎಸ್ ಹೆಗಡೆ ಈ ಕಾರ್ಯಕ್ರಮದ ರೂವಾರಿಯಾಗಿದ್ದಾರೆ. ಈ ಸ್ಪರ್ಧೆಗೆ ನೊಂದಣಿಯಾಗಿದ್ದ ಶಾಲೆಗಳ ಪೈಕಿ ಅಗ್ರ 50 ಶಾಲೆಗಳು ಈ ಸ್ಪರ್ಧೆಗೆ ಆಯ್ಕೆಯಾಗಿದ್ದವು. ನಂತರದ ಹಂತದ ಸ್ಪರ್ಧೆಯಿಂದ ಅಗ್ರ 25 ಶಾಲೆಗಳು ಸ್ಪರ್ಧೆಯಲ್ಲಿ ಮುಂದುವರಿದವು. ನಗರದ ವಿವಿಧ ಕ್ಷೇತ್ರಗಳ ಗಣ್ಯರು ಈ ಸ್ಪರ್ಧೆಯ ತೀರ್ಪುಗಾರರರಾಗಿದ್ದು ಶಾಲಾ ಮಕ್ಕಳು ನಗರದ ಅಭಿವೃದ್ಧಿಗೆ ತಮ್ಮ ಆಲೋಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

25 ಶಾಲೆಗಳ ಪೈಕಿ ಬನಶಂಕರಿಯ ಪ್ರೆಸಿಡೆನ್ಸಿ ಶಾಲೆ, ಎಸ್ ಜೆಆರ್ ಕೆಂಗೇರಿ ಪಬ್ಲಿಕ್ ಶಾಲೆ, ಆಕ್ರಿಡ್ಜ್ ಇಂಟರ್ ನ್ಯಾಷನಲ್ ಶಾಲೆ, ಸೇಂಟ್ ಮಾರ್ಕ್ಸ್ ಕಾನ್ವೆಂಟ್, ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆ ಬನಶಂಕರಿ, ಮಿತ್ರಾ ಅಕಾಡೆಮಿ, ಕಸ್ತೂರಿ ನಗರ ಪ್ರೆಸಿಡೆನ್ಸಿ ಶಾಲೆ ಅಂತಿಮ ಸುತ್ತಿಗೆ ಪ್ರವೇಶ ಪಡೆದಿವೆ.

ಈ ಸ್ಪರ್ಧೆಯ ಅಂತಿಮ ಸುತ್ತನ್ನು ಜನವರಿ 13, 2024ರಂದು ನಡೆಯುವ ಯೂತ್ ಲೀಡರ್ ಶಿಪ್ ಸಮ್ಮೇಳನ 2023 ದಲ್ಲಿ ನಡೆಸಲಾಗುವುದು. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶಾಲಾ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಲೇಖಕಿ ಸುಧಾ ಮೂರ್ತಿ ಈ ಸಮ್ಮೇಳನದಲ್ಲಿ ಮುಖ್ಯ ತೀರ್ಪುಗಾರರಾಗಿರುತ್ತಾರೆ. ನಟ ರಮೇಶ್ ಅರವಿಂದ್ ಸ್ಪೂರ್ತಿ ಮಾತುಗಳನ್ನು ಆಡಲಿದ್ದಾರೆ.

ಯೂತ್ ಲೀಡರ್ ಶಿಪ್ ಸಮ್ಮೇಳನ ಹಾಗೂ ಐಡಿಯಾಥಾನ್ ಕಾರ್ಯಕ್ರಮವನ್ನು ಗ್ರೇಕ್ಯಾಪ್ಸ್ ನಾಲೆಡ್ಜ್ ಟ್ರೈಬ್ ಹಾಗೂ ಶಿಕ್ಷಣ ತಜ್ಞ ಗಿರಿ ಪಿಕ್ ಬ್ರೈನ್ ಬಾಲಸುಬ್ರಮನಿಯಂ ಅವರು ನಡೆಸಿಕೊಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X