ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Date:

Advertisements

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್ ​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಎಚ್‌ಡಿ ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ಪೂರ್ಣಗೊಂಡಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಬಂದಿರುವ ಮಾಹಿತಿಯ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Advertisements

“ಕಳೆದ ಮೂರು ದಿನಗಳಿಂದ ಜ್ವರ ಸೇರಿದಂತೆ ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಸದ್ಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ” ಎಂದು ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಬಜೆಟ್‌ ಅಧಿವೇಶನ | ನಿಮ್ಮ ಗೂಂಡಾಗಿರಿಗೆಲ್ಲ ಹೆದರಲ್ಲ; ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು

ಎಚ್‌ ಡಿ ದೇವೇಗೌಡ ಅವರಿಗೆ 91 ವರ್ಷ ಪೂರ್ಣಗೊಂಡಿದ್ದರೂ, ಕೂಡ ಅವರು ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.

ಇತ್ತೀಚೆಗೆ ಮುಕ್ತಾಯ ಕಂಡ ರಾಜ್ಯಸಭಾ ಅಧಿವೇಶನದಲ್ಲಿ ಕೂಡ ಪಾಲ್ಗೊಂಡಿದ್ದರು. ಅಲ್ಲದೇ, ಜ.22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲೂ ಕುಟುಂಬ ಸಹಿತ ಭಾಗವಹಿಸಿದ್ದರು.

ವಾಡಿಕೆಯ ಆರೋಗ್ಯ ತಪಾಸಣೆಯಷ್ಟೇ: ದೇವೇಗೌಡ ಟ್ವೀಟ್

ತಮ್ಮ ಆರೋಗ್ಯದ ಬಗ್ಗೆ ಸುದ್ದಿಯಾಗುತ್ತಿದ್ದಂತೆಯೇ ಟ್ವೀಟ್ ಮಾಡಿರುವ ದೇವೇಗೌಡರು, “ಕೆಲವೊಂದು ಸುದ್ದಿವಾಹಿನಿಗಳಲ್ಲಿ ನನ್ನ ಆರೋಗ್ಯದ ಬಗ್ಗೆ ಉತ್ಪ್ರೇಕ್ಷಿತ ವರದಿಗಳು ಬಂದಿರುವುದನ್ನು ಗಮನಿಸಿದೆ. ಇದು ಸಾಮಾನ್ಯ ವಾಡಿಕೆಯ ಆರೋಗ್ಯ ತಪಾಸಣೆಯಷ್ಟೇ. ಶೀಘ್ರವೇ ಮನೆಗೆ ಹಿಂದಿರುಗಲಿದ್ದೇನೆ. ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X