ಆಪರೇಷನ್ ಸಿಂಧೂರದ ಬಗ್ಗೆ ಸಂಸತ್ತಿನಲ್ಲಿ ವಿವರಿಸದೆ ವಿದೇಶಿ ಸರ್ಕಾರಕ್ಕೆ ಮಾಹಿತಿ ನೀಡುವುದು ಸರಿಯಲ್ಲ: ಸಿಪಿಐ

Date:

Advertisements

ಆಪರೇಷನ್ ಸಿಂಧೂರದ ಬಗ್ಗೆ ವಿವರಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿದೆ. ಆದರೆ ಈವೆರೆಗೂ ಕೇಂದ್ರ ಸರ್ಕಾರ ಅಧಿವೇಶನ ಕರೆದಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಪ್ರಧಾನ ಕಾರ್ಯದರ್ಶಿ ಡಿ ರಾಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ದೇಶದ ಸಂಸತ್ತಿಗೆ ಆಪರೇಷನ್ ಸಿಂಧೂರದ ಬಗ್ಗೆ ಯಾವುದೇ ಮಾಹಿತಿ ನೀಡದೆ ವಿದೇಶಿ ಸರ್ಕಾರಕ್ಕೆ ಮಾಹಿತಿ ನೀಡಿರುವುದು ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ.

ಆಪರೇಷನ್ ಸಿಂಧೂರದ ಬಳಿಕ ಪ್ರಮುಖ ದೇಶಗಳಿಗೆ ಸರ್ವಪಕ್ಷ ನಿಯೋಗವನ್ನು ಕಳುಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ನಿಯೋಗವನ್ನು ಕೂಡಾ ರಚಿಸಿದೆ. ಈ ನಿಯೋಗ ರಚನೆಯನ್ನು ಎಡಪಕ್ಷವಾದ ಸಿಪಿಐಎಂ ಸ್ವಾಗತಿಸಿದೆ. ತಮ್ಮ ಪಕ್ಷವೂ ಈ ನಿಯೋಗದ ಭಾಗವಾಗಲು ಬಯಸುತ್ತದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಕೊಪ್ಪಳ | ಪಹಲ್ಗಾಮ್‌ ಉಗ್ರ ಕೃತ್ಯಕ್ಕೆ ಸಿಪಿಐಎಂಎಲ್ ಖಂಡನೆ

Advertisements

ಆದರೆ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಈ ನಿಯೋಗವನ್ನು ಕಳುಹಿಸುವ ನಿರ್ಧಾರವು ಅಪಾರದರ್ಶಕವಾಗಿದೆ ಎಂದು ಹೇಳಿದೆ. “ಆಪರೇಷನ್ ಸಿಂಧೂರ ನಂತರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಸೇರಿದಂತೆ ಪ್ರಮುಖ ದೇಶಗಳಿಗೆ ಸರ್ವಪಕ್ಷ ನಿಯೋಗಗಳನ್ನು ಕಳುಹಿಸುವ ಸರ್ಕಾರದ ನಿರ್ಧಾರವು ಅಪಾರದರ್ಶಕತೆಯಿಂದ ಕೂಡಿದೆ. ಯಾವುದೇ ರಾಜಕೀಯ ಪಕ್ಷವನ್ನು ಸಮಾಲೋಚಿಸಿಲ್ಲ ಅಥವಾ ವಿವರಿಸಿಲ್ಲ. ಈ ನಿಯೋಗಗಳ ಆದೇಶದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಭಾರತದ ಸ್ವಂತ ಸಂಸತ್ತು ಮತ್ತು ಜನರು ಆಪರೇಷನ್ ಸಿಂಧೂರದ ಬಗ್ಗೆ ಯಾವುದೇ ಮಾಹಿತಿ ತಿಳಿಯದೆಯೇ ಕತ್ತಲೆಯಲ್ಲಿರುವಾಗ ವಿದೇಶಿ ಸರ್ಕಾರಗಳಿಗೆ ವಿವರಿಸಲಾಗುವುದು ಎಂಬುದು ಸ್ವೀಕಾರಾರ್ಹವಲ್ಲ” ಎಂದು ಎಕ್ಸ್‌ನಲ್ಲಿ ಡಿ ರಾಜಾ ಅವರು ಪೋಸ್ಟ್ ಮಾಡಿದ್ದಾರೆ.

“ಪಹಲ್ಗಾಮ್ ದಾಳಿ ಆದಾಗನಿಂದ ಇಡೀ ದೇಶವು ಭಯೋತ್ಪಾದನೆ ವಿರುದ್ಧ ನಿಂತಿದೆ. ಆದರೂ, ಬಿಜೆಪಿ ಈ ಕ್ಷಣವನ್ನು ಬಳಸಿಕೊಂಡು ವಿಭಜನೆಗಳನ್ನು ಇನ್ನಷ್ಟು ಹೆಚ್ಚಿಸಲು, ರಾಜಕೀಯ ಲಾಭ ಗಳಿಸಲು ಮತ್ತು ಭಿನ್ನಾಭಿಪ್ರಾಯ ಹೊಂದಿರುವವರನ್ನು ನಿಗ್ರಹಿಸಲು ಬಳಸಿಕೊಂಡಿದೆ. ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರ ಬಂಧನ ಅವರ ಮಾತಿಗಾಗಿ ಅಲ್ಲ, ಬದಲಾಗಿ ಅವರ ಗುರುತು ಮತ್ತು ತಾರ್ಕಿಕ ಟೀಕೆಗಾಗಿ ಮಾಡಲಾಗಿದೆ. ಇದು ಅನೇಕ ಅಪಾಯಕಾರಿ ಚಿಹ್ನೆಗಳಲ್ಲಿ ಒಂದಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನಕ್ಕೆ ಸಿಪಿಐಎಂ ಬೆಂಬಲ; ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹ

“ಒಪ್ಪಂದ ನಿಯಮದ ಬಗ್ಗೆ ಉಂಟಾಗಿರುವ ಗೊಂದಲವನ್ನು ಮತ್ತು ಈ ಒಪ್ಪಂದವನ್ನು ತಾನೇ ಮಾಡಿಸಿದ್ದು ಎಂಬ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಸರ್ಕಾರ ವಿವರಣೆಯನ್ನು ನೀಡಬೇಕು. ಸರ್ಕಾರ ಇನ್ನೂ ಟ್ರಂಪ್ ಹೇಳಿಕೆಯನ್ನು ಸಂಪೂರ್ಣವಾಗಿ ಅಲ್ಲಗಳೆಯದಿರುವುದು ಅಥವಾ ಖಂಡಿಸದಿರುವುದು ಆಶ್ಚರ್ಯಕರ” ಎಂದು ಸಿಪಿಐ ನಾಯಕ ಹೇಳಿದ್ದಾರೆ.

“ಬಿಜೆಪಿಯ 11 ವರ್ಷಗಳ ವಿದೇಶಾಂಗ ನೀತಿ ನಿಲುವುಗಳು ಹೆಚ್ಚಿನ ಫಲ ನೀಡಿಲ್ಲ. ಜಿ20 ಶೃಂಗಸಭೆಯ ಬಗ್ಗೆ ಎಲ್ಲಾ ಪ್ರಚಾರವನ್ನು ಮಾಡಿದರೂ ಯಾವುದೇ ಪ್ರಮುಖ ದೇಶವು ಭಾರತದ ಪರವಾಗಿ ಸ್ಪಷ್ಟವಾಗಿ ನಿಂತಿಲ್ಲ. ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಧರ್ಮದ ವಿಚಾರದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯ್ ಶಾ ಅವರಂತಹ ಬಿಜೆಪಿ ನಾಯಕರು ಸಚಿವರಾಗಿ ಮುಂದುವರೆದಿದ್ದಾರೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತೆ ಮಾಡಿದೆ” ಎಂದು ಹೇಳಿದರು.

“ವಿದೇಶಗಳಿಗೆ ಮಾಹಿತಿ ನೀಡುವ ಮೊದಲು ಸರ್ಕಾರ ತಮ್ಮ ದೇಶದ ಜನರಿಗೆ ಮಾಹಿತಿ ನೀಡಬೇಕು, ಗೌರವ ನೀಡಬೇಕು. ಪಾರದರ್ಶಕತೆ, ಒಗ್ಗಟ್ಟು ಮತ್ತು ಘನತೆಯ ಅಗತ್ಯ ಭಾರತಕ್ಕೆ ಇದೆಯೇ ಹೊರತು ದುರಹಂಕಾರ, ಅಪಾರದರ್ಶಕತೆ ಮತ್ತು ಒಡಕು ಬೇಕಾಗಿಲ್ಲ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X