ಸೋದರಳಿಯ ಆಕಾಶ್‌ರನ್ನು ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ ಮಾಯಾವತಿ, ಕಾರಣವೇನು?

Date:

Advertisements

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಕೆಳಗಿಳಿಸಿದ್ದಾರೆ.

ಈ ಬಗ್ಗೆ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಮಾಯಾವತಿ ಮಾಹಿತಿ ನೀಡಿದ್ದಾರೆ. ಆಕಾಶ್ ಈ ಪಾತ್ರವನ್ನು ನಿರ್ವಹಣೆ ಮಾಡುವಷ್ಟು ‘ಪ್ರಬುದ್ಧತೆ’ಗೆ ತಲುಪಬೇಕು ಎಂದು ಮಾಯಾವತಿ ಹೇಳಿಕೊಂಡಿದ್ದಾರೆ.

“ಬಿಎಸ್‌ಪಿ, ಒಂದು ಪಕ್ಷ ಮಾತ್ರವಲ್ಲದೆ, ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಸ್ವಾಭಿಮಾನ ಮತ್ತು ಕಾನ್ಶಿ ರಾಮ್ ಜಿ ಅವರ ಸಾಮಾಜಿಕ ಬದಲಾವಣೆಗಾಗಿ ಇರುವ ಆಂದೋಲನವಾಗಿದೆ ಎಂಬುದು ತಿಳಿದಿದೆ. ಇದಕ್ಕಾಗಿ ನಾನು ನನ್ನ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ಅದಕ್ಕೆ ವೇಗ ನೀಡಲು ಹೊಸ ಪೀಳಿಗೆಯನ್ನು ಸಹ ಸಿದ್ಧಪಡಿಸಲಾಗುತ್ತಿದೆ” ಎಂದಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಉತ್ತರಪ್ರದೇಶ | ಈ ಸಲ ಮೈತ್ರಿ ಕೂಟಗಳಿಂದ ಯಾಕೆ ದೂರ ಉಳಿದರು ಮಾಯಾವತಿ?

“ಈ ನಿಟ್ಟಿನಲ್ಲಿ ಪಕ್ಷದಲ್ಲಿ ಇತರ ಜನರನ್ನು ಉತ್ತೇಜಿಸುವ ಜೊತೆಗೆ, ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಮತ್ತು ಅವರ ಉತ್ತರಾಧಿಕಾರಿ ಎಂದು ಘೋಷಿಸಿದ್ದೆ. ಆದರೆ ಈಗ ಆಕಾಶ್ ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಯಿಂದ ಅವರನ್ನು ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ದೂರ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಆಕಾಶ್ ಅವರ ತಂದೆ ಆನಂದ್ ಕುಮಾರ್ ಅವರು ಪಕ್ಷದಲ್ಲಿ ತಮ್ಮ ಪಾತ್ರದಲ್ಲಿ ಮುಂದುವರಿಯಲಿದ್ದಾರೆ ಎಂದೂ ಮಾಯಾವತಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಕಳೆದ ವರ್ಷ ಡಿಸೆಂಬರ್ 10ರಂದು ಮಾಯಾವತಿ ಅವರು 28 ವರ್ಷದ ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದರು. ಲಂಡನ್‌ನಲ್ಲಿ ಎಂಬಿಎ ಮಾಡಿರುವ ಆನಂದ್‌ಗೆ ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆ ನೀಡಲಾಗಿತ್ತು.

ಇನ್ನು ಇತ್ತೀಚೆಗೆ ಆಕಾಶ್ ಆನಂದ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಚುನಾವಣಾ ರ್‍ಯಾಲಿಯಲ್ಲಿ ಭಾಷಣ ಮಾಡುತ್ತಾ ಆಕಾಶ್ ಆನಂದ್, ಬಿಜೆಪಿ ಸರ್ಕಾರವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X