ಚುನಾವಣಾ ಆಯೋಗ ನಕಲಿ ಮತದಾನ ನಿಲ್ಲಿಸುವವರೆಗೂ ಚುನಾವಣೆಯಲ್ಲಿ BSP ಸ್ಪರ್ಧಿಸುವುದಿಲ್ಲ: ಮಾಯಾವತಿ

Date:

Advertisements

ಇತ್ತೀಚೆಗೆ, ಉತ್ತರ ಪ್ರದೇಶವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆ ನಡೆದಿದೆ. ಶನಿವಾರ (ನ.23) ಫಲಿತಾಂಶವೂ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಬಿಎಸ್‌ಪಿ ವರಿಷ್ಠೆ ಮಾಯಾವತಿ, “ಉತ್ತರ ಪ್ರದೇಶದಲ್ಲಿ ನಡೆದ ಉಪಚುನಾವಣೆಯಲ್ಲಿ ಅಕ್ರಮ ನಡೆದಿದೆ. ಚುನಾವಣಾ ಆಯೋಗವು ನಕಲಿ ಮತದಾನವನ್ನು ನಿಲ್ಲಿಸುವವರೆಗೂ ಚುನಾವಣೆಗಳಲ್ಲಿ ಬಿಎಸ್‌ಪಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ, “ಚುನಾವಣಾ ಆಯೋಗವು ನಕಲಿ ಮತದಾನವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಅದಕ್ಕಾಗಿ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ನಮ್ಮ ಪಕ್ಷವು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ” ಎಂದಿದ್ದಾರೆ.

“ಇತ್ತೀಚೆಗೆ ನಡೆದ ಉಪಚುನಾವಣೆ ವೇಳೆ ಮತ ಯಂತ್ರಗಳನ್ನು ದುರ್ಬಳಕೆ ಮಾಡಲಾಗಿದೆ. ಬಿಎಸ್‌ಪಿಯನ್ನು ದುರ್ಬಲಗೊಳಿಸಲು ಷಡ್ಯಂತ್ರಗಳು ನಡೆದಿವೆ” ಎಂದು ಆರೋಪಿಸಿದ್ದಾರೆ.

Advertisements

ಉತ್ತರ ಪ್ರದೇಶದಲ್ಲಿ 9 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಎಸ್‌ಪಿ ಸ್ಪರ್ರಧಿಸಿತ್ತು. ಆದರೆ, ಯಾವುದೇ ಕ್ಷೇತ್ರಗಳಲ್ಲಿಯೂ ಬಿಎಸ್‌ಪಿ ಗೆದ್ದಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X