ಶಿಕಾರಿಪುರದಿಂದಲೇ ವಿಜಯೇಂದ್ರ ಕಣಕ್ಕೆ : ಮಗನ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದ ಬಿಎಸ್‌ವೈ

Date:

  • ವಿಜಯೇಂದ್ರ ಸ್ಪರ್ಧೆ ಕ್ಷೇತ್ರವನ್ನು ಅಂತಿಮಗೊಳಿಸಿದ ಬಿಎಸ್‌ವೈ
  • ವರುಣಾ ಬದಲು ಶಿಕಾರಿಪುರದಿಂದ ಕಣಕ್ಕಿಳಿಯಲು ಸೂಚನೆ

ರಾಜ್ಯ ರಾಜಕಾರಣದ ಕುತೂಹಲ ಕೆರಳಿಸಿದ್ದ ಬಿ ವೈ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಊಹಾಪೋಹಗಳಿಗೆ ಬಿಜೆಪಿ ಚುನಾವಣಾ ಸಂಸದೀಯ ಸಮಿತಿ ಸದಸ್ಯ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

- Advertisement -

ತಮ್ಮ ಪುತ್ರ ವಿಜಯೇಂದ್ರ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಆ ಮೂಲಕ ಈ ಬಗ್ಗೆ ಎದ್ದಿದ್ದ ಎಲ್ಲ ಬಗೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ ಯಡಿಯೂರಪ್ಪ ವಿಜಯೇಂದ್ರನಿಗೆ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡಲು ಹೇಳಿದ್ದೇನೆ ಎಂದಿದ್ದಾರೆ.

ನನ್ನ ರಾಜಕೀಯ ಕರ್ಮಭೂಮಿ ಶಿಕಾರಿಪುರ. ಇಲ್ಲಿಂದಲೇ ವಿಜಯೇಂದ್ರನ ರಾಜಕೀಯವೂ ಆರಂಭವಾಗಲಿ ಎನ್ನುವುದು ನನ್ನ ಆಶಯ. ಅದರಂತೆ ಆತನಿಗೆ ಇಲ್ಲಿಂದಲೇ ಸ್ಪರ್ಧಿಸಲು ಹೇಳಿರುವುದಾಗಿ ಯಡಿಯೂರಪ್ಪ ತಿಳಿಸಿದರು.

ಜೊತೆಗೆ ಶಿಕಾರಿಪುರದಿಂದಲೇ ವಿಜಯೇಂದ್ರನ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ವರಿಷ್ಠರನ್ನು ಕೇಳಿಕೊಳ್ಳುತ್ತೇನೆ. ಎಷ್ಟೇ ಒತ್ತಡ ಬಂದರೂ ಅವನ ರಾಜಕೀಯದ ಅದೃಷ್ಟ ಪರೀಕ್ಷೆ ಇಲ್ಲಿಂದಲೇ ಆಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಈ ಸುದ್ದಿ ಓದಿದ್ದೀರಾ?:`ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ…

ಇನ್ನು ಬಿಎಸ್ ವೈ ಪ್ರತಿಕ್ರಿಯೆಗೂ ಮುನ್ನ ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ್ದ ಬಿ ವೈ ವಿಜಯೇಂದ್ರ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅವರು ಹೇಳಿದಲ್ಲಿ ನಾನು ಸ್ಪರ್ಧಿಸುವೆ. ಸದ್ಯ ಶಿಕಾರಿಪುರದಿಂದ ಸ್ಪರ್ಧಿಸಲು ತಂದೆಯವರು ನನಗೆ ಸೂಚಿಸಿದ್ದಾರೆ. ನಾನೂ ಈಗಾಗಲೇ ಒಂದು ಸುತ್ತು ಶಿಕಾರಿಪುರ ಕ್ಷೇತ್ರದ ಪ್ರವಾಸ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯದ 224 ಕ್ಷೇತ್ರಗಳಲ್ಲೂ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹವಾಗುತ್ತಿದೆ. ಚುನಾವಣೆಯಲ್ಲಿ ಯಾವುದೂ ಅಸಾಧ್ಯವಲ್ಲ. ಅಂತಿಮವಾಗಿ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ ಎಂದು ವಿಜಯೇಂದ್ರ ಹೇಳಿದ್ದರು.

ಮುಂದುವರೆದು ಮಾತನಾಡಿದ ಅವರು ಮೊದಲು ನನಗೆ ಟಿಕೆಟ್ ನೀಡಲಿ ಆನಂತರ ಎರಡು ಅಥವಾ ಒಂದು ಕ್ಷೇತ್ರದಲ್ಲಿ ಕಣಕ್ಕಿಳಿಯುವುದೋ ಎನ್ನುವುದನ್ನು ನಿರ್ಧರಿಸೋಣ ಎಂದಿದ್ದರು.

ಇದಕ್ಕೂ ಮೊದಲು ವಿಜಯೇಂದ್ರ ಸ್ಪರ್ಧಾ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವರುಣಾ ಕ್ಷೇತ್ರವನ್ನೂ ಒಳಗೊಂಡಂತೆ ರಾಜ್ಯದ ಉಳಿದ ಕ್ಷೇತ್ರಗಳಿಗಾಗಿ ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿಯೂ ಯಡಿಯೂರಪ್ಪ ಹಾಗೂ ಚುನಾವಣಾ ಸಂಸದೀಯ ಮಂಡಳಿಯದ್ದು ಎಂದು ಹೇಳಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ...

ಫ್ಯಾಕ್ಟ್‌ಚೆಕ್ | ‘ಮೋದಿಗೂ 76 ವರ್ಷ, ಅವರ ಶಿಕ್ಷಕರಿಗೂ 76 ವರ್ಷ’; ಅಸಲಿಯತ್ತೇನು?

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಸಂದರ್ಭದಲ್ಲಿ, ಅವರ ಶಾಲಾ...