ಬಜೆಟ್ 2025 | ಬಿಹಾರಕ್ಕೆ ಭರಪೂರ ಕೊಡುಗೆ, ಚುನಾವಣೆಗಾಗಿ ಎಂದ ವಿರೋಧ ಪಕ್ಷಗಳು, ಆಕ್ರೋಶ

Date:

Advertisements

2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಿಹಾರ ರಾಜ್ಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ. ಆ ಮೂಲಕ ವಿರೋಧ ಪಕ್ಷಗಳ ಇತರ ರಾಜ್ಯಗಳ ಸಂಸದರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಬಿಹಾರಕ್ಕೆ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ ಮಂಜೂರು, ಪಟ್ನಾ ಐಐಟಿ ವಿಸ್ತರಣೆಗೆ ಅನುದಾನ, 500 ಹೆಕ್ಟೇರ್ ಜಮೀನಿಗೆ ನೀರಾವರಿ ಯೋಜನೆಗಳನ್ನು ಘೋಷಿಸುವ ಮೂಲಕ ಬಿಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿರುವುದು ಕಂಡು ಬಂದಿದೆ.

ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ ಮಾಡಲಾಗುವುದು. ಇದು ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?: ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಪರಿಚಯ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಎನ್‌ಡಿಎ ಪ್ರಮುಖ ಪಾಲುದಾರ ಪಕ್ಷವಾಗಿರುವ ಸಂಯುಕ್ತ ಜನತಾದಳ ಬಿಹಾರದ ಪ್ರಗತಿ ನಿಟ್ಟಿನಲ್ಲಿ ಹಲವು ಬೇಡಿಕೆಗಳನ್ನು ಮಂಡಿಸಿದ್ದು, ಅದರಂತೆಯೇ ಬಜೆಟ್‌ನಲ್ಲಿ ಆದ್ಯತೆಯನ್ನು ನೀಡಿದಂತೆ ಕಾಣುತ್ತಿದೆ. ಬಿಹಾರ ರಾಜ್ಯ ಮೂಲದ ಮಧುಬನಿ ಕಲೆಯ ಹಿನ್ನೆಲೆ ಹೊಂದಿರುವ ವಿಶೇಷ ಸೀರೆಯನ್ನು ಉಟ್ಟು ಬಜೆಟ್ ಮಂಡನೆಗೆ ಆಗಮಿಸಿದ ನಿರ್ಮಲಾ ಅವರ ಪ್ರತಿ ವಿಷಯಗಳ ಮಂಡನೆಯಲ್ಲಿ ಬಿಹಾರದ ಹೆಸರು ಉಲ್ಲೇಖವಾಗುತ್ತಿರುವುದು ಕಂಡು ಬಂದಿತು.

ಈ ವರ್ಷದ ಕೊನೆಯಲ್ಲಿ, ಅಕ್ಟೋಬರ್ ಅಥವಾ ನವೆಂಬರ್‍‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಇದರ ಹಿಂದೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಳ್ಳಲಾಗಿದೆ, ಮತದಾರರನ್ನು ಓಲೈಕೆ ಮಾಡುವುದಾಗಿದೆ ಎಂದು ವಿರೋಧ ಪಕ್ಷಗಳ ಸಂಸದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X